ತುಮಕೂರು, (ಜೂ.26) tumkurnews.in
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ವೀಕ್ಷಣೆಗೆ ರಾಜ್ಯದ 7,600 ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಪಕ್ಷದ ವಕ್ತಾರ ಹಾಗೂ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.
Tumkurnews.in ಜತೆಗೆ ಮಾತನಾಡಿದ ಅವರು, ರಾಜ್ಯದ 7,600 ಸ್ಥಳಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದ ವೀಕ್ಷಣೆ ಮತ್ತು ಚರ್ಚೆಗೆ ವ್ಯವಸ್ಥೆ ಮಾಡಲಾಗಿದೆ. ಜುಲೈ 2ರಂದು ಬೆಳಗ್ಗೆ 9.30ಕ್ಕೆ ಪದಗ್ರಹಣ ಕಾರ್ಯಕ್ರಮ ಆರಂಭವಾಗಲಿದೆ. ಪಕ್ಷದ ಎಲ್ಲಾ ಕಾರ್ಯಕರ್ತರು ಸಕಾಲಕ್ಕೆ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಪಕ್ಷಕ್ಕೆ ಬಲ ತುಂಬಬೇಕು ಎಂದರು.
ಹಾಗೆಯೇ ಜನವಿರೋಧಿ ಕಾಯ್ದೆಗಳಾದ ಎಪಿಎಂಸಿ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಜನ ಜಾಗೃತಿ ನಡೆಸಬೇಕು. ಭೂ ಸುಧಾರಣಾ ಕಾಯ್ದೆ ತಿದ್ದಪಡಿ ಅತ್ಯಂತ ಜನವಿರೋಧಿಯಾಗಿದೆ. ಕೃಷಿಕರು, ಕೃಷಿ ಕೂಲಿ ಕಾರ್ಮಿಕರಾಗಿ ಬದಲಾಗಬೇಕಾದ ಅನಿವಾರ್ಯವನ್ನು ಬಿಜೆಪಿ ಸೃಷ್ಠಿಸಿದೆ ಎಂದು ದೂರಿದರು.
+ There are no comments
Add yours