ತುಮಕೂರು(ಜು.2) tumkurnews.in
ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ ಸಮನ್ವಯ ಶಿಕ್ಷಣ ಚಟುವಟಿಕೆಯ ತುಮಕೂರು(ದ) ಜಿಲ್ಲಾ ವ್ಯಾಪ್ತಿಯ 5 ತಾಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರೌಢ)-9 ಹುದ್ದೆಗಳಿಗೆ ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶೇಷ ಬಿ.ಇಡಿ ವಿದ್ಯಾರ್ಹತೆ ಹೊಂದಿರುವವರನ್ನು ನೇರಗುತ್ತಿಗೆ ಮೂಲಕ ತಾತ್ಕಾಲಿಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು, ಪ್ರಮಾಣ ಪತ್ರಗಳು ಮತ್ತು ಆರ್.ಸಿ.ಐ ನೊಂದಣಿ(2019ನೇ ಸಾಲಿಗೆ) ಪ್ರಮಾಣ ಪತ್ರದೊಂದಿಗೆ ಸ್ವ-ವಿವರವುಳ್ಳ ಮಾಹಿತಿಯನ್ನು ಅಂಚೆ ಅಥವಾ ಮುದ್ದಾಂ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಡಾ. ರಾಧಕೃಷ್ಣನ್ ರಸ್ತೆ, ಎಸ್.ಎಸ್.ಪುರಂ, ತುಮಕೂರು-572102 ವಿಳಾಸಕ್ಕೆ ಜುಲೈ 7ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9448999407 ಅನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours