Tumkur News
ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ಪ್ರೊ. ಮೇಜರ್ ಡಿ.ಚಂದ್ರಪ್ಪ ಅವರು ಇಂದು ಮಧ್ಯಾಹ್ನ 2 ಗಂಟೆಗೆ ನಿಧನರಾಗಿದ್ದಾರೆ.
ಇಸಿಐಎಲ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
76 ವಯಸ್ಸಿನ ಚಂದ್ರಪ್ಪ ಅವರು ಕಳೆದ ಒಂದು ವಾರದಿಂದ ಅನಾರೋಗ್ಯ ಕ್ಕೆ ತುತ್ತಾಗಿ ಸಿದ್ಧಗಂಗಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.
ರೈಲ್ವೆ ಇಲಾಖೆಯಲ್ಲಿ 3ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೇಜರ್ ಡಿ.ಚಂದ್ರಪ್ಪ ಅವರು ಅಧ್ಯಾಪಕ ವೃತ್ತಿಯಿಂದ ನಿವೃತ್ತಿ ಹೊಂದಿದ ನಂತರ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿ, ಕಳೆದ ಎರಡು ಕ.ಸಾ.ಪ.ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರು ಮೂವರು ಹೆಣ್ಣು ಮಕ್ಕಳು, ಪತ್ನಿ ಅಗಲಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ; ಅರ್ಜಿ ಆಹ್ವಾನ
ನಾಳೆ ಅಂತ್ಯಕ್ರಿಯೆ: ಗುಬ್ಬಿ ತಾಲ್ಲೂಕಿನ ಕುಪ್ಪೂರು ಪಾಳ್ಯದ ಅವರ ತೋಟದಲ್ಲಿ ನಾಳೆ (ಜೂ. 9) ಬೆಳಿಗ್ಗೆ 11 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.
+ There are no comments
Add yours