Tumkur News
ತುಮಕೂರು: ಮುರಾರ್ಜಿ ದೇಸಾಯಿ ಕಿತ್ತೂರು ರಾಣಿ ವಸತಿ ಶಾಲೆ, ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಮಶಾನದ ಅಭಿವೃದ್ಧಿ ಹೆಸರಿನಲ್ಲಿ ಕೋಟಿಗಟ್ಟಲೆ ಲೂಟಿ ಮಾಡಲಾಗಿದೆ ಎಂದು ದಲಿತಪರ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.
ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕ ಪ್ರೇಮ ವಿರುದ್ಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.
ಪರಿಶಿಷ್ಟ ಜಾತಿ-ಪಂಗಡದ ಅನುದಾನವನ್ನು ಬೇಕಾಬಿಟ್ಟಿಯಾಗಿ ದುರುಪಯೋಗ ಮಾಡಲಾಗಿದೆ. ತಕ್ಷಣ ಬಾಬು ಜಗಜೀವನ್ ರಾಮ್ ಜಿಲ್ಲಾ ಭವನ ಕಾಮಗಾರಿ ಪ್ರಾರಂಭಿಸುವಂತೆ ಒಕ್ಕೂಟ ಒತ್ತಾಯಿಸಿತು.
+ There are no comments
Add yours