Tumkur News
ತುಮಕೂರು: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಎಂ. ಶಿವಣ್ಣ ಅವರು ಜೂನ್ 14 ಮತ್ತು 15 ರಂದು ತುಮಕೂರು ಜಿಲ್ಲೆಗೆ ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ಶಿಬಿರ
ಜೂ. 14ರಂದು ಮಧ್ಯಾಹ್ನ 2:30ಗಂಟೆಗೆ ತುಮಕೂರಿಗೆ ಆಗಮಿಸುವ ಅಧ್ಯಕ್ಷರು, ನಗರದ ಎಂ.ಜಿ.ರಸ್ತೆಯ ಬಾಲಭವನದಲ್ಲಿ ಮಧ್ಯಾಹ್ನ 3:30 ಗಂಟೆಗೆ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ ಪೌರಕಾರ್ಮಿಕರು ಮತ್ತು ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳು ಹಾಗೂ ಮುಖಂಡರುಗಳ ಜೊತೆ ಕುಂದುಕೊರತೆಗಳ ಕುರಿತು ನೇರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.
ಜೂ. 18ರಂದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ
ಜೂ.15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಎಂ.ಜಿ.ರಸ್ತೆಯ ಬಾಲಭವನದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಧಿಕಾರಿಗಳಿಗೆ ಎಂ.ಎಸ್.ಕಾಯ್ದೆ-2013ರ ತರಬೇತಿ, ಬೆಳಿಗ್ಗೆ 11ಗಂಟೆಗೆ ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. ನಂತರ ಮಧ್ಯಾಹ್ನ ೩ ಗಂಟೆಗೆ ತುಮಕೂರಿನಿಂದ ಬೆಂಗಳೂರಿಗೆ ತೆರಳುವರು.
+ There are no comments
Add yours