Tumkur News
ತುಮಕೂರು: ವಿಶ್ವ ಯೋಗ ದಿನಾಚರಣೆ ಪ್ರಯುಕ್ತ 400ಕ್ಕೂ ಹೆಚ್ಚು ಯೋಗಾಪಟುಗಳಿಂದ ಯೋಗಾಭ್ಯಾಸ ನಡೆಯಿತು.
ಕಾರು ಬಸ್ ಡಿಕ್ಕಿ; ಇಬ್ಬರು ಶಾಲಾ ವಿದ್ಯಾರ್ಥಿಗಳ ಸಾವು
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಇಂಟರ್ನ್ಯಾಷನಲ್ ನ್ಯಾಚುರೋಪತಿ ಆರ್ಗನೈಸೇಶನ್ ಮಂಜುನಾಥ್ ನೇತೃತ್ವದಲ್ಲಿ ಯೋಗಭ್ಯಾಸ ಮಾಡಲಾಯಿತು.
ಹೊಸ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿ ಕಾಣೆ
ಮಾನವೀಯತೆಗಾಗಿ ಯೋಗ ಎಂಬ ಶೀರ್ಷಿಕೆಯಡಿ ಯೋಗಾಭ್ಯಾಸ ಮಾಡಿದರು. ಪತಾಂಜಲಿ ಯೋಗ ಶಿಕ್ಷಣ ಸಮಿತಿ ನೇತೃತ್ವ ವಹಿಸಿತ್ತು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಅಶೋಕ್
ನಗರ ಶಾಸಕ ಜ್ಯೋತಿಗಣೇಶ್ ಮತ್ತು ಹಲವು ಸಂಸ್ಥೆಗಳಾದ ಆರೋಗ್ಯ ಭಾರತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ರಾಷ್ಟ್ರೀಯ ಮಾನವ ಪರಿಸರ ರಕ್ಷಣಾ ಪಡೆ ಪಟುಗಳು ಹಾಗೂ ನಗರದ ವೃದ್ಧರು, ವಿದ್ಯಾರ್ಥಿಗಳು, ಮಕ್ಕಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
+ There are no comments
Add yours