Tumkur News
ತುಮಕೂರು: ವಡ್ಡರಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕ ಬಯಲು ರಂಗಮಂದಿರದಲ್ಲಿ ಉಳಿದುಕೊಂಡಿದ್ದ ಸುಮಾರು 70 ವರ್ಷದ ವೃದ್ಧೆ ವಯೋ ಸಹಜ ಖಾಯಿಲೆಯಿಂದ ನರಳುತ್ತಿದ್ದು, ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು.
ರಸ್ತೆ ಅಪಘಾತ; ಪತ್ನಿ ಮಡಿಲಲ್ಲಿ ಪತಿ ಸಾವು
ವೃದ್ಧೆಯು ಚಿಕಿತ್ಸೆ ಫಲಕಾರಿಯಾಗದೆ ಜೂನ್ 17 ರಂದು ಮೃತಪಟ್ಟಿದ್ದು, ವಾರಸುದಾರರು ತಿಳಿದು
ಬಂದಿರುವುದಿಲ್ಲ. ಮೃತಳು 5.4 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ ಹೊಂದಿದ್ದು, ಎರಡೂ ಕೈಗಳಲ್ಲಿ ಹೂವಿನ ಹಚ್ಚೆ ಇದ್ದು, ಮೃತಳ ವಾರಸುದಾರರು ಯಾರಾದರೂ ಇದ್ದಲ್ಲಿ ದೂರವಾಣಿ ಸಂಖ್ಯೆ 0816-2275301, 2272340,2272451ನ್ನು ಸಂಪರ್ಕಿಸಬೇಕೆಂದು ತುಮಕೂರು ಗ್ರಾಮಾಂತರ ಪೊಲೀಸ್ ಸಬ್ ಇನ್ಪೆಕ್ಟರ್ ಮನವಿ ಮಾಡಿದ್ದಾರೆ.
+ There are no comments
Add yours