Tumkur News
ತುಮಕೂರು: ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಡಿವೈಎಸ್ಪಿ ಟಿ.ಆರ್. ಕೃಷ್ಣಮೂರ್ತಿ (66) ನಗರದಲ್ಲಿ ನಿಧನರಾಗಿದ್ದಾರೆ.
ಬ್ರಿಡ್ಜ್ ನಿಂದ ಕೆಳಗೆ ಬಿದ್ದು ಬೈಕ್ ರೈಡರ್ ಸಾವು
ಟಿ.ಆರ್. ಕೃಷ್ಣಮೂರ್ತಿಯವರು ಜಿಲ್ಲೆಯಲ್ಲಿ ಸಬ್ಇನ್ಸ್ಪೆಕ್ಟರ್, ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಕಳೆದ ಒಂದು ವಾರದ ಹಿಂದಷ್ಟೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ನಿವೃತ್ತ ಡಿವೈಎಸ್ಪಿ ಟಿ.ಆರ್. ಕೃಷ್ಣಮೂರ್ತಿ ಯವರ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
+ There are no comments
Add yours