ಪುರಸಭೆ ಮಾಜಿ ಅಧ್ಯಕ್ಷೆ ಪತಿಯ ಚಿನ್ನ, ಮೊಬೈಲ್ ಕಸಿದು ಪರಾರಿ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

Tumkur News
ಕುಣಿಗಲ್: ದುಷ್ಕರ್ಮಿಗಳ ಗುಂಪೊಂದು ಪುರಸಭೆ ಮಾಜಿ ಅಧ್ಯಕ್ಷೆ ಪತಿಗೆ ಚಾಕು ತೋರಿಸಿ ಬೆದರಿಸಿ ಚಿನ್ನದ ಚೈನ್ ಹಾಗೂ ಮೊಬೈಲ್‌ ಕಸಿದುಕೊಂಡು ಪರಾರಿಯಾಗಿರುವ ಘಟನೆ ಪಟ್ಟಣದ ಚಿಕ್ಕಕೆರೆ ರೈಲ್ವೆ ಬಿಡ್ಜ್ ತೋಟದ ಬಳಿ ನಡೆದಿದೆ.

ಈಜಲು ಹೋಗಿ ವ್ಯಕ್ತಿ ಸಾವು

ಪಟ್ಟಣದ ಕೆಆರ್ಎಸ್ ಆಗ್ರಹಾರ ನಿವಾಸಿ ಪುರಸಭೆ ಮಾಜಿ ಅಧ್ಯಕ್ಷೆ ನಳಿನಾ ಅವರ ಪತಿ ಬೈರಪ್ಪ ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ತಮ್ಮ ತೋಟ ನೋಡಿಕೊಂಡು ಮನೆಗೆ ಹೋಗುತ್ತಿರುವಾಗ ಬೈಕ್ ನಲ್ಲಿ ಬಂದ ನಾಲ್ವರು ಬೈರಪ್ಪ ಅವರನ್ನು ಅಡ್ಡಗಟ್ಟಿ ಚಾಕುವಿನಿಂದ ಬೆದರಿಸಿ ಅವರ ಕತ್ತಿನಲ್ಲಿದ್ದ 60 ಗ್ರಾಂ ಚಿನ್ನದ ಚೈನ್ ಹಾಗೂ ಮೊಬೈಲ್‌ ಕಸಿದುಕೊಂಡರು.

ಅನುಮಾನಸ್ಪದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಅದೇ ಸಮಯಕ್ಕೆ ತಂದೆಯನ್ನು ಹುಡುಕಿಕೊಂಡು ಬಂದ ಮಗನನ್ನು ನೋಡಿದ ದುಷ್ಕರ್ಮಿಗಳು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣದ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಮಾಜಿ ಪುರಸಭಾ ಅಧ್ಯಕ್ಷೆ ನಳಿನಾ ತಿಳಿಸಿದರು.

About The Author

You May Also Like

More From Author

+ There are no comments

Add yours