ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ನಗದು ಅನುದಾನಕ್ಕೆ ಅರ್ಜಿ ಆಹ್ವಾನ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

Tumkurnews
ತುಮಕೂರು; 2021-22ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ (12ನೇ ತರಗತಿ)ಯ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ (ಗಂಡು ಮತ್ತು ಹೆಣ್ಣು) ‘ಜನರಲ್ ಕೆ.ಎಸ್. ತಿಮ್ಮಯ್ಯ’ ನಗದು ಅನುದಾನ ನೀಡಲು ಅರ್ಜಿ ಆಹ್ವಾನಿಸಿದೆ.

ಉದ್ಯೋಗ ಮೇಳ; ಐಟಿಐ, ಡಿಪ್ಲೊಮಾ, ಬಿ.ಇ, PG ಪಾಸಾದವರಿಗೆ ನೇರ ಸಂದರ್ಶನ
ಒಂದು ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ ಇಬ್ಬರು ಅಭ್ಯರ್ಥಿಗಳನ್ನು ಎಸ್‍ಎಸ್‍ಎಲ್‍ಸಿಯಲ್ಲಿ ಹಾಗೂ ಅತೀ ಹೆಚ್ಚು ಅಂಕ ಪಡೆದ ದ್ವಿತೀಯ ಪಿಯುಸಿಯ ಒಬ್ಬ ಅಭ್ಯರ್ಥಿಯನ್ನು ನಗದು ಅನುದಾನಕ್ಕೆ ಆಯ್ಕೆ ಮಾಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಅಡಕಗಳೊಂದಿಗೆ ತ್ರಿಪ್ರತಿಯಲ್ಲಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕಡೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ದೂ.ವಾ.ಸಂ. 080-25588718ನ್ನು ಸಂಪರ್ಕಿಸಬೇಕೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours