ಮಂಡಿಪೇಟೆಯಲ್ಲಿ ಭೂಕುಸಿತ; ಶಾಸಕ ಜ್ಯೋತಿಗಣೇಶ್ ಪರಿಶೀಲನೆ

1 min read

 

Tumkurnews
ತುಮಕೂರು; ನಗರದ ಮಂಡಿಪೇಟೆ ಮುಖ್ಯರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದು, ಸ್ಥಳಕ್ಕೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಭೇಟಿ‌ ನೀಡಿದರು.

ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಜ್ಯೋತಿಗಣೇಶ್ ಭೇಟಿ; ಭೀಮಸಂದ್ರ ಕೆರೆ ಪರಿಶೀಲನೆ
ಈ ವೇಳೆ ಮಾತನಾಡಿದ ಅವರು, ರಸ್ತೆಯಲ್ಲಿ ಆಳವಾದ ಗುಂಡಿ ಬಿದ್ದಿರುವ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಮಂಡಿಪೇಟೆಯಲ್ಲಿ ಭಾರಿ ವಾಹಗಳ ಸಂಚಾರವಿರುವುದರಿಂದ ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಮಾರ್ಟ್‌ ಸಿಟಿ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಂಚಾರಿ ಪೊಲೀಸರಿಗೆ ವಾಹನಗಳು ಯಾವುದೇ ಅಪಘಾತಕ್ಕೀಡಾಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹೇಶ್‍ಬಾಬು, ಮಂಜುನಾಥ್, ಮಂಡಿಪೇಟೆ ವರ್ತಕರು ಜೊತೆಯಲ್ಲಿದ್ದರು.

ಮಳೆ ಅವಾಂತರ; ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

About The Author

You May Also Like

More From Author

+ There are no comments

Add yours