Tumkurnews
ತುಮಕೂರು; ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕೊರಟಗೆರೆ ತಾಲ್ಲೂಕಿನ ಸುವರ್ಣಮುಖಿ, ಗರುಡಾಚಲ ಮತ್ತು ಜಯಮಂಗಲಿ ನದಿಗಳು ತುಂಬಿ ಹರಿಯುತ್ತಿವೆ.
ಎಚ್ಚರ ಅಗತ್ಯ; ಮಳೆ ಹೆಚ್ಚಾಗುತ್ತಿದ್ದಂತೆ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ವಾಸವಿರುವ ರೈತರು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ.
ಮಳೆಗೆ ಮತ್ತೊಂದು ಬಲಿ; ನೀರಿನಲ್ಲಿ ಕೊಚ್ಚಿ ಹೋಗಿ ಯುವಕ ಸಾವು
ಕೊರಟಗೆರೆ, ಮಧುಗಿರಿ, ಕುಣಿಗಲ್, ಪಾವಗಡ ಸೇರಿದಂತೆ ಸಾಕಷ್ಟು ಕಡೆಗಳಲ್ಲಿ ನದಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಸಂಚಾರ ಕಡಿತವಾಗಿದೆ. ಮನೆ, ಅಂಗಡಿಗಳಿಗೆ ನೀರು ನುಗ್ಗಿದ್ದು, ಸಾಕಷ್ಟು ಹಾನಿ ಸಂಭವಿಸಿದ್ದು, ಜನತೆ ಮಳೆ ಅನಾಹುತಗಳ ಬಗ್ಗೆ ಜಾಗೃತೆ ವಹಿಸಬೇಕಿದೆ.
(ಜಯಮಂಗಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದು)
ಮಳೆ ಅವಾಂತರ; ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
+ There are no comments
Add yours