ಮಳೆ ಅವಾಂತರ; ಮಲ್ಲೂರು ಅಮಾನಿಕೆರೆ ಏರಿ ಬಿರುಕು, ಶಾಲಾ ಕಾಂಪೌಂಡ್ ನೆಲಸಮ
Tumkurnews
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ, ಮಲ್ಲೂರು ಗ್ರಾಮದಲ್ಲಿ ಸತತವಾಗಿ ಒಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
( ಮಲ್ಲೂರು ಗ್ರಾಮದಲ್ಲಿ ಮಳೆ ಅವಾಂತರ; ವಿಡಿಯೋ)
ವಿಪರೀತ ಮಳೆಯಿಂದಾಗಿ ಮಲ್ಲೂರು ಗ್ರಾಮದ ಸರ್ಕಾರಿ ಶಾಲಾ ಕಾಂಪೌಂಡ್ ಸಂಪೂರ್ಣವಾಗಿ ಕುಸಿದು ನೆಲಕ್ಕುರುಳಿದೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದಷ್ಟೇ ನಿರ್ಮಾಣವಾದ ಕಾಂಪೌಂಡ್ ಮಳೆಯ ರಭಸಕ್ಕೆ ಸಿಲುಕಿ ಕುಸಿದಿರುವುದು ಒಂಡೆದೆಯಾದರೆ ಕೆಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ವರ್ಗಾವಣೆಗೊಂಡ ಶಿಕ್ಷಕರನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿನಿಯರು
ಇದಿಷ್ಟೇ ಅಲ್ಲದೆ ಗ್ರಾಮದ ಅಮಾನಿಕೆರೆ ಕೋಡಿ ಬಿದ್ದಿದ್ದು, ಕೆರೆಯ ಏರಿ ಬಿರುಕು ಬಿಟ್ಟು ಅಪಾಯದ ಅಂಚಿನಲ್ಲಿದೆ. ಇನ್ನು ಮಳೆಯ ಆರ್ಭಟ ಇದೇ ರೀತಿ ಮುಂದುವರೆದರೆ ಗ್ರಾಮಕ್ಕೆ ನೀರು ನುಗ್ಗುವ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ವ್ಯಾಪಕ ಮಳೆ; ಶಾಲೆಗಳಿಗೆ ರಜೆ ಘೋಷಿಸಲು ಡಿಸಿ ಸೂಚನೆ
+ There are no comments
Add yours