ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

1 min read

Tumkurnews
ತುಮಕೂರು; ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಬೊಮ್ಮತಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ ಎಂಬುವರ ಪುತ್ರ ರಮೇಶ್(20) ಮೃತ ದುರ್ದೈವಿ.

ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದ ಮಹಿಳೆ ನಾಪತ್ತೆ; ಶೋಧ ಕಾರ್ಯಾಚರಣೆ
ಹಲಸಿನಹಣ್ಣನ್ನು ಕೀಳಲು ಹೋಗಿದ್ದ ರಮೇಶ್, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗ್ರಾಮದ ಕೃಷ್ಣಪ್ಪ ಎಂಬುವರ ಇಬ್ಬರು ಮಕ್ಕಳಲ್ಲಿ ಮೃತ ರಮೇಶ್ ಹಿರಿಯ ಮಗನಾಗಿದ್ದನು.

ಕುಕ್ಕರ್ ಸ್ಪೋಟ; ಅಂಗನವಾಡಿ ಕಾರ್ಯಕರ್ತೆಗೆ ಗಾಯ
ಶಾಸಕ ಭೇಟಿ; ಘಟನಾ ಸ್ಥಳಕ್ಕೆ ಶಾಸಕ ವೆಂಕಟರಮಣಪ್ಪ ಬೆಸ್ಕಾಂ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದು, ಮೃತನ ಪೋಷಕರಿಗೆ ಸಾಂತ್ವನ ತಿಳಿಸಿದ್ದಾರೆ ಹಾಗೂ ಪರಿಹಾರ ಸೇರಿದಂತೆ ಸರ್ಕಾರದಿಂದ ಸಿಗುವ ಇತರೆ ಸವಲತ್ತುಗಳನ್ನು ಪೋಷಕರಿಗೆ ದೊರಕಿಸಿಕೊಡುವ ಭರವಸೆ ನೀಡಿದರು.
ವರದಿ; ಇಮ್ರಾನ್ ಉಲ್ಲಾ, ಪಾವಗಡ

ಮಳೆ ಅವಾಂತರ; ವಿದ್ಯುತ್ ಸ್ಪರ್ಶಿಸಿ ಪಾವಗಡದ ವಾಟರ್ ಮ್ಯಾನ್ ಸಾವು

About The Author

You May Also Like

More From Author

+ There are no comments

Add yours