ಮುರಿದು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

1 min read

 

ಮುರಿದು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

Tumkurnews
ಕೊರಟಗೆರೆ; ರೈತನೋರ್ವ ಸೀಮೆ ಹಸುಗಳಲ್ಲಿ ಹಾಲು ಕರೆಯಲು ಹೋಗುತ್ತಿದ್ದಾಗ ವಿದ್ಯುತ್ ಕಂಬದಿಂದ ತಂತಿ ಬಿದ್ದಿರುವುದು ಗಮನಿಸದೇ ವಿದ್ಯುತ್ ತಂತಿ ತುಳಿದು ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ಕೊರಟಗೆರೆ ತಾಲೂಕಿನ ಕ್ಯಾತಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊರಟಗೆರೆ ತಾಲೂಕಿನ ಪಾತಗಾನಹಳ್ಳಿ ಸಮೀಪದ ಕ್ಯಾತಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ದುರ್ಘಟನೆ ಜರುಗಿದ್ದು, ಇದೇ ಗ್ರಾಮದ ಮಹೇಶ್ (32) ಮೃತ ದುರ್ದೈವಿ.

ಬಡ ಟೈಲರ್’ನ ಜೀವ ಬಲಿ ಪಡೆದ ಮಧುಮೇಹ
ಸೀಮೆ ಹಸುಗಳಿಂದ ಹಾಲು ಕರೆಯಲು ಮನೆಯ ಮುಸರೆ ನೀರು ಇಡಲು ಹೋಗುವಾಗ ಮನೆಯ ಹಿಂಭಾಗದ ಹಿತ್ತಲಿನಲ್ಲಿ ವಿದ್ಯುತ್ ಕಂಬದಿಂದ ಲೈನ್ ಬಿದ್ದಿರುವುದು ಗಮನಿಸದೆ ವಿದ್ಯುತ್ ಲೈನ್’ಗೆ ಸಿಲುಕಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಮೃತ ಮಹೇಶ್ ಮನೆಯವರು ರಾತ್ರಿ 8 ಗಂಟೆ ಆದರೂ ಮಹೇಶ್ ಮನೆಗೆ ಬಾರದಿರುವುದನ್ನು ಗಮನಿಸಿ ಹಾಲಿನ ಡೈರಿ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಹುಡುಕಾಡಿದ್ದಾರೆ. ಎಲ್ಲಾ ಕಡೆ ಹುಡುಕಾಡಿದ ಬಳಿಕ ರಾತ್ರಿ 1 ಗಂಟೆ ಸಮಯದಲ್ಲಿ ಮನೆಯ ಹಿಂಭಾಗದಲ್ಲಿ ಶವ ಪತ್ತೆಯಾಗಿದೆ.
ಕೊರಟಗೆರೆ ತಾಲೂಕಿನ ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪಿಎಸ್ಐ ಮಹಾಲಕ್ಷ್ಮಮ್ಮ ಹಾಗೂ ಸಿಪಿಐ ಕೆ.ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ; ಲಕ್ಷ್ಮೀಕಾಂತ್, ಕೊರಟಗೆರೆ

ತುಮಕೂರು‌ ಜಿಲ್ಲಾಸ್ಪತ್ರೆ ವಿರುದ್ಧ ತನಿಖೆಗೆ ಆದೇಶ

About The Author

You May Also Like

More From Author

+ There are no comments

Add yours