9 ಬಲಿ ಪಡೆದ ಕ್ರೂಸರ್; ಅಪಘಾತ ನಡೆದಿದ್ದೇಗೆ?; ಜಿಲ್ಲಾಧಿಕಾರಿ ಹೇಳಿದ್ದೇನು? ವಿಡಿಯೋ

1 min read

 

ಭೀಕರ ಅಪಘಾತಕ್ಕೆ ನಡೆದಿದ್ದೇಗೆ?; ಜಿಲ್ಲಾಧಿಕಾರಿ ಹೇಳಿದ್ದೇನು?
Tumkurnews
ತುಮಕೂರು; ಜಿಲ್ಲೆಯ ಶಿರಾ ತಾಲ್ಲೂಕಿನ ಬಾಳೇನಹಳ್ಳಿಯಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು‌ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದರು.
ಅಪಘಾತದಲ್ಲಿ ಗಾಯಗೊಂಡ ಸುಮಾರು 15 ಮಂದಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್ ಆಸ್ಪತ್ರೆಗೆ ‌ಭೇಟಿ ನೀಡಿ ಸೂಕ್ತ ಚಿಕಿತ್ಸೆಗೆ ನಿರ್ದೇಶನ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಘಟನೆಯಲ್ಲಿ ಗಾಯಗೊಂಡವರ ಪೈಕಿ ಇಬ್ಬರನ್ನು ಬೆಂಗಳೂರಿನ ನಿಮಾನ್ಸ್’ಗೆ ದಾಖಲಿಸಲಾಗಿದೆ. ಸ್ಥಳದಲ್ಲೇ ಸಾವನ್ನಪ್ಪಿರುವ 9 ಜನರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದು‌ ತಿಳಿಸಿದರು.
ಅಪಘಾತಕ್ಕೆ ನಡೆದಿದ್ದೇಗೆ?; ರಾಯಚೂರು ಜಿಲ್ಲೆಯ ವಿವಿಧ ಗ್ರಾಮಗಳಿಂದ ಸುಮಾರು ‌24 ಮಂದಿ ಬುಧವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಕ್ರೂಸರ್’ನಲ್ಲಿ ಹೊರಟಿದ್ದರು. ಮಾರ್ಗಮಧ್ಯದಲ್ಲಿ ಗುರುವಾರ ಬೆಳಗಿನ ಜಾವ 4.30ರ ಸಮಯದಲ್ಲಿ ಕ್ರೂಸರ್ ಚಾಲಕ ಟ್ರಕ್’ವೊಂದನ್ನು ಓವರ್ ಟೇಕ್ ಮಾಡುವ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕ್ರೂಸರ್ ಡಿವೈಡರ್’ಗೆ ಡಿಕ್ಕಿಯಾಗಿ ತಲೆ ಕೆಳಗಾಗಿ ಬಿದ್ದಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಭೀಕರ ರಸ್ತೆ ಅಫಘಾತ; 9 ಮಂದಿ ದುರ್ಮರಣ

About The Author

You May Also Like

More From Author

+ There are no comments

Add yours