Tumkurnews
ತುಮಕೂರು; ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 14 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಚಿಕ್ಕನಹಳ್ಳಿ, ಬಾಳೇನಹಳ್ಳಿ ಘಟನೆ ಸಂಭವಿಸಿದ್ದು, ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು ಇಬ್ಬರು ಮಕ್ಕಳು ಸೇರಿದ್ದಾರೆ.
ರಾಯಚೂರು ಹಾಗೂ ಮಾನ್ವಿಯಿಂದ ಕೂಲಿ ಕೆಲಸಕ್ಕೆ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ.
23 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಕ್ರೂಸರ್’ಗೆ ಹಿಂಬದಿಯಿಂದ ಲಾರಿ ಗುದ್ದಿ ಅಪಘಾತ ಸಂಭವಿಸಿದೆ.
ಗಾಯಾಳುಗಳೆಲ್ಲರೂ ಜಿಲ್ಲಾಸ್ಪತ್ರೆ ಮತ್ತು ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಪುರ ವಾಡ್, ಎಎಸ್ಪಿ ಉದೇಶ್ ಭೇಟಿ ನೀಡಿದ್ದಾರೆ.
+ There are no comments
Add yours