ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ಐವರ ಬಂಧನ

1 min read

ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ಐವರ ಬಂಧನ

Tumkurnews
ತುಮಕೂರು: ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಬೈಚಾಪುರ ಕ್ರಾಸ್ ನಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ನಾಗರಾಜು ಮೇಲೆ ಐವರ ತಂಡವೊಂದು ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ ಕೇಳಿ ಬಂದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಅಕ್ಕಿರಾಂಪುರ ಕುರಿ, ಮೇಕೆ ಸಂತೆಯು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶನಿವಾರದ ಸಂತೆಯನ್ನು ನಡೆಸದಂತೆ ಈಗಾಗಲೇ ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗಿತ್ತು. ಅದರೆ ಎಂದಿನಂತೆ ಕುರಿ ಮೇಕೆ ವ್ಯಾಪಾರಸ್ಥರು ಬೊಲೆರೊ ವಾಹನದಲ್ಲಿ ಕುರಿ ಮೇಕೆಗಳನ್ನು ಸಂತೆ ವ್ಯಾಪಾರಕ್ಕೆ ತುಂಬಿಕೊಂಡು ಅರಸಾಪುರ ಗ್ರಾಮದ ಕಡೆಯಿಂದ ಬೈಚಾಪುರ ಕಡೆಗೆ ಬರುತ್ತಿದ್ದರು. ಈ‌ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವಾಹನವನ್ನು ತಡೆದು ವಾಪಸ್ಸು ಕಳಿಸಲು ಮುಂದಾಗಿದ್ದಾರೆ. ಆಗ ಏಕಾಏಕಿ 6 ಜನ ಆರೋಪಿಗಳು ಮುಖ್ಯಪೇದೆ ನಾಗರಾಜು ಮೇಲೆ ಹಲ್ಲೆಗೆ ಮುಂದಾಗಿದ್ದು, ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಹೆಚ್ಚಿನ ಪೊಲೀಸ್ ಸಿಬ್ಬಂದಿ, ಆರೋಪಿಗಳಾದ ಅರಸಾಪುರ ಅಗ್ರಹಾರ ಗ್ರಾಮದ ಚನ್ನಪ್ಪ (54), ನರಸಿಂಹರಾಜು(28), ನವೀನ್ ಕುಮಾರ್ (28), ಲಕ್ಷ್ಮೀಪತಿ(26) ಮತ್ತು ನಾಗೇಶ್(22) ಎಂಬುವವರ ಮೇಲೆ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪ್ರಮುಖ ಆರೋಪಿ ತಲೆಮರೆಸಿಕೊಂಡು, ಆತನ ಪತ್ತೆ ಕಾರ್ಯ ಮುಂದುವರೆದಿದೆ.

About The Author

You May Also Like

More From Author

+ There are no comments

Add yours