KSRTC ಬಸ್ ನಿಲ್ದಾಣದ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ; ಆಸ್ಪತ್ರೆಯಲ್ಲಿ ಸಾವು

1 min read

 

ಅಪರಿಚಿತ ಸಾವು
Tumkurnews
ತುಮಕೂರು; ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತುಮಕೂರು ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 60 ವರ್ಷದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲುಪಡಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 26ರಂದು ಮೃತಪಟ್ಟಿರುತ್ತಾನೆ. ಮೃತನು 165 ಸೆಂ.ಮೀ. ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲುಮುಖ ಹೊಂದಿದ್ದು, ಮೃತನ ಮೈಮೇಲೆ ನೀಲಿ ಬಣ್ಣದ ರೆಡಿಮೇಡ್ ಅರ್ಧ ತೋಳಿನ ಷರ್ಟ್ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ವಾ.ಸಂ. 0816-2278388, ಮೊ.ಸಂ. 9480802945/ 30/ 00ಯನ್ನು ಸಂಪರ್ಕಿಸುವಂತೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.

You May Also Like

More From Author

+ There are no comments

Add yours