ತುಮಕೂರು, ಕುಣಿಗಲ್, ಕೊರಟಗೆರೆಗೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

1 min read

 

ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ

Tumkurnews
ತುಮಕೂರು; ಡಿ.7ರ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೊರಡುವ ಮುಖ್ಯಮಂತ್ರಿಗಳು, ಬೆಳಿಗ್ಗೆ 10.05ಕ್ಕೆ ತುಮಕೂರು ವಿ.ವಿ.ಯ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಬಳಿಕ ನಗರದ ತುಮಕೂರು -ಶಿವಮೊಗ್ಗ ರಿಂಗ್ ರಸ್ತೆಯಲ್ಲಿ ಏರ್ಪಡಿಸಿರುವ ನಾರಾಯಣ ಉಚಿತ ನೇತ್ರ ಚಿಕಿತ್ಸಾ ಕೇಂದ್ರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಬೆಳಿಗ್ಗೆ 11.30 ರಿಂದ ಸಂಜೆ 4 ಗಂಟೆಯವರೆಗೆ ಗೂಳೂರು ಪಟ್ಟಣ ಮತ್ತು ಕುಣಿಗಲ್ ಮತ್ತು ಕೊರಟಗೆರೆ ತಾಲ್ಲೂಕುಗಳಲ್ಲಿ ಏರ್ಪಡಿಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ಹುಲಿಕುಂಟೆ ಬೈಪಾಸ್ ರಸ್ತೆ ಹೆಲಿಪ್ಯಾಡ್‍ಗೆ ಆಗಮಿಸಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

You May Also Like

More From Author

+ There are no comments

Add yours