ಕೊರಟಗೆರೆ; ಜಿಪಂ ಸಿಇಒ ಜಿ.ಪ್ರಭು ಭೇಟಿ; ಅಧಿಕಾರಿಗಳೊಂದಿಗೆ ಸಭೆ

1 min read

 

ಕೊರಟಗೆರೆ; ಜಿಪಂ ಸಿಇಒ ಜಿ.ಪ್ರಭು ಭೇಟಿ; ಅಧಿಕಾರಿಗಳೊಂದಿಗೆ ಸಭೆ

Tumkurnews
ತುಮಕೂರು; ಮಹಾತ್ಮಗಾಂಧಿ ನರೇಗಾ ಯೋಜನೆ ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕಾದಲ್ಲಿ, ರೈತರು, ಗ್ರಾಮೀಣ ಜನರ ಸಹಕಾರ ಅಗತ್ಯ. ಹಾಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿ ಪಿಡಿಓಗಳು ತಮ್ಮ ಗ್ರಾಮ ಪಂಚಾಯಿತಿಯ ಕನಿಷ್ಟ 500 ಮಂದಿ ರೈತರನ್ನು ತಮ್ಮ ಸಂಪರ್ಕದಲ್ಲಿ ಹೊಂದಿರಬೇಕು. ಆ ಮೂಲಕ ಗ್ರಾಮದ ಜನರ ಅವಶ್ಯಕತೆಗಳನ್ನು ಅರಿತು ಕೆಲಸ ನಿರ್ವಹಿಸಬೇಕು ಎಂದು ಜಿಪಂ ಸಿಇಒ ಪ್ರಭು ಜಿ. ಸಲಹೆ ನೀಡಿದರು.
ಕೊರಟಗೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕುಡಿಯುವ ನೀರು, ಸ್ವಚ್ಚತೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಜನತೆಗೆ ಸಮರ್ಪಕ ರೀತಿಯಲ್ಲಿ ಕಲ್ಪಿಸಿಕೊಡಲು ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.
ತಾಲ್ಲೂಕಿನಲ್ಲಿ ಹೆಚ್ಚೆಚ್ಚು ಅಭಿವೃದ್ಧಿ ಕೆಲಸಗಳು ಆಗಬೇಕಾದರೆ, ಉದ್ಯೋಗ ಚೀಟಿಗಳನ್ನು ಪ್ರತಿ ಮನೆ ಮನೆಗೆ ನೀಡಬೇಕು. ಆ ಮೂಲಕ ರೈತರಿಗೆ ಹೆಚ್ಚಿನ ಸವಲತ್ತುಗಳನ್ನು ನೀಡಬೇಕು. ಈಗಾಗಲೇ ನೀಡಿರುವಂತಹ ಉದ್ಯೋಗ ಚೀಟಿಗಳಲ್ಲಿ ಕ್ರಿಯಾಶೀಲ ಉದ್ಯೋಗ ಚೀಟಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದರು.
ಸಾರ್ವಜನಿಕರ ಸಮಸ್ಯೆಗಳು ಹಾಗೂ ಮನವಿಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು, ಮಹಾತ್ಮಗಾಂಧಿ ನರೇಗಾ ಯೋಜನೆ, ಜಲಜೀವನ್ ಮಿಷನ್, ಸ್ವಚ್ಚ ಭಾರತ್ ಮಿಷನ್(ಗ್ರಾ), ಗ್ರಾಮೀಣ ಕುಡಿಯುವ ನೀರು ಪೂರೈಕೆ, ಎನ್‍ಆರ್’ಎಲ್‍ಎಂ, ವಸತಿ ಯೋಜನೆ, ಡಿಜಿಟಲ್ ಗ್ರಂಥಾಲಯ, ದೂರದೃಷ್ಟಿ ಯೋಜನೆ, ಬಾಪೂಜಿ ಸೇವಾಕೇಂದ್ರ ಮೊದಲಾದ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಸರ್ಕಾರದ ಆದೇಶಗಳನ್ನು ಕಾಲ ಕಾಲಕ್ಕೆ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ತುಮಕೂರು; ಜಿಲ್ಲೆಯಲ್ಲಿ 6 ತಿಂಗಳಲ್ಲಿ 158 ಶಿಶುಗಳ ಸಾವು!
ಈ ಸಂದರ್ಭದಲ್ಲಿ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ ದೊಡ್ಡಸಿದ್ದಯ್ಯ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

You May Also Like

More From Author

+ There are no comments

Add yours