ನಾಲ್ಕು ತಿಂಗಳಲ್ಲಿ 47 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಜಿಲ್ಲೆಯಲ್ಲಿ 174 ಪೋಕ್ಸೊ ಕೇಸ್ ದಾಖಲು

1 min read

ಪೋಕ್ಸೊ ಕಾಯ್ದೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು; ಅಪರ ಜಿಲ್ಲಾಧಿಕಾರಿ

Tumkurnews
ತುಮಕೂರು: ಜಿಲ್ಲೆಯಲ್ಲಿ ಏಪ್ರಿಲ್ 2023ರಿಂದ ಜುಲೈ ಮಾಹೆಯ ಅಂತ್ಯಕ್ಕೆ ಹೊಸದಾಗಿ ಪೋಕ್ಸೊ ಕಾಯ್ದೆಯಡಿ 47 ಪ್ರಕರಣಗಳು ದಾಖಲಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಿಷನ್ ವಾತ್ಸಲ್ಯ ಯೋಜನೆಯಡಿ ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಆಟೋ ಚಾಲಕ ಸೇರಿ ಇಬ್ಬರಿಗೆ ಜೈಲು ಶಿಕ್ಷೆ
ಜಿಲ್ಲೆಯಲ್ಲಿ ಹೆಚ್ಚಾಗಿ ಕೊರಟಗೆರೆ, ಮಧುಗಿರಿ, ಗುಬ್ಬಿ ಕುಣಿಗಲ್ ತಾಲ್ಲೂಕುಗಳಲ್ಲಿ ಪೋಕ್ಸೊ ಪ್ರಕರಣಗಳು ದಾಖಲಾಗುತ್ತಿವೆ. ಹಿಂದಿನ ಸಾಲಿನ ಬಾಕಿ ಪ್ರಕರಣಗಳು 127 ಸೇರಿದಂತೆ ಒಟ್ಟು 174 ಪ್ರಕರಣಗಳು ದಾಖಲಾಗಿವೆ ಎಂದರು.
ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪೋಕ್ಸೊ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ನಾಮಫಲಕಗಳನ್ನು ಅಳವಡಿಸಬೇಕು
ಜಿಲ್ಲೆಯಲ್ಲಿ ಉಪಕಾರ ಯೋಜನೆಯಡಿ ಮೂರು ಮಕ್ಕಳು ನೋಂದಾಯಿತರಾಗಿದ್ದಾರೆ. ಈ ಮಕ್ಕಳು ಪಾಲನಾ ಸಂಸ್ಥೆಗಳಿಂದ ಬಿಡುಗಡೆಯಾದ 18 ವರ್ಷ ವಯಸ್ಸನ್ನು ಮೀರಿದ ಅರ್ಹ ಮಕ್ಕಳಿಗೆ ಆರ್ಥಿಕವಾಗಿ ಸ್ವಾಲಂಬಿಗಳಾಗುವವರೆಗೆ ಅಥವಾ ಗರಿಷ್ಠ 3 ವರ್ಷಗಳ ಅವಧಿಯವರೆಗೆ ಪ್ರತಿ ಫಲಾನುಭವಿಗೆ ತಿಂಗಳಿಗೆ 5 ಸಾವಿರ ರೂ.ಗಳನ್ನು ನೀಡಲಾಗುವುದು, ಅರ್ಹ ಮಕ್ಕಳು ಈ ಯೋಜನೆಯಿಂದ ವಂಚಿತರಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.

ತುಮಕೂರು; ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ
ಹೆಣ್ಣು ಮಕ್ಕಳ ಅನುಪಾಲನಾ ಗೃಹ ಯೋಜನೆಯಡಿ 6 ಮಕ್ಕಳು ದಾಖಲಾಗಿದ್ದಾರೆ. ಇದರ ಪೈಕಿ 5 ಮಕ್ಕಳು ಕುಣಿಗಲ್ ತಾಲ್ಲೂಕಿನ ವಾಣಿಗೆರೆ ಸಂತ ಗ್ರೆಗೋರಿಯಸ್ ದಯಾಭವನದ ಅನುಪಾಲನಾ ಗೃಹದಲ್ಲಿದ್ದಾರೆ. 3 ಜನರಿಗೆ ಹೊಲಿಗೆ ತರಬೇತಿಗೆ ಹಾಗೂ ಇಬ್ಬರನ್ನೂ ಕಾಲೇಜಿಗೆ ದಾಖಲು ಮಾಡಲಾಗಿರುತ್ತದೆ. ಒಬ್ಬರು ಕೋಲಾರ ಅನುಪಾಲನಾ ಗೃಹದಲ್ಲಿದ್ದಾರೆ. ಈ ಹೆಣ್ಣು ಮಕ್ಕಳಿಗೆ 21 ವರ್ಷ ತುಂಬುವವರೆಗೆ ಪುನರ್ವಸತಿಯನ್ನು ಒದಗಿಸಲು, ವಿದ್ಯಾಭ್ಯಾಸದ ಹಾಗೂ ವೃತ್ತಿಪರ ಕೌಶಲ್ಯ ತರಬೇತಿ ನೀಡಲು ಸ್ವಯಮ ಸೇವಾ ಸಂಸ್ಥೆಯ ನೆರವಿನೊಂದಿಗೆ ಈ ಯೋಜನೆಯನ್ನು 2022-23ನೇ ಸಾಲಿನಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಡೈವರ್ಸ್’ಗೆ ಬಂದವರು ದಾಂಪತ್ಯಕ್ಕೆ ರಿವರ್ಸ್!; ಐದು ಜೋಡಿಗಳನ್ನು ಒಂದು ಮಾಡಿದ ಕೋರ್ಟ್
ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಜಿಲ್ಲೆಯ 10 ಫಲಾನುಭವಿಗಳಿಗೆ ಮಾಸಿಕ 3500 ರೂ. ಧನಸಹಾಯ ಸೌಲಭ್ಯವನ್ನು ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ವಾತ್ಸಲ್ಯ ಸದನ ಯೋಜನೆಯಡಿ ಬಾಲಕ ಮತ್ತು ಬಾಲಕಿಯರ ಬಾಲಮಂದಿರ, ವೀಕ್ಷಣಾಲಯ, ಮಕ್ಕಳ ಕಲ್ಯಾಣ ಸಮಿತಿ ಸೌಲಭ್ಯಗಳು ಒಂದೇ ಸೂರಿನಡಿ ಕಲ್ಪಿಸುವ ಉದ್ದೇಶದಿಂದ ನಗರದಲ್ಲಿ ಕಟ್ಟಡ ನಿರ್ಮಿಸಲು ಭೂಮಿಯನ್ನು ನೀಡುವ ಕುರಿತು ಒಂದು ಪ್ರಸ್ತಾವನೆಯನ್ನು ತುಮಕೂರು ತಹಶಿಲ್ದಾರ್ ಅವರಿಗೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಪ್ರಾಪ್ತ ಬಾಲಕಿಯ ಅಪಹರಿಸಿ ವಿವಾಹ; ಯುವಕನ ಬಂಧನ
ಜಿಲ್ಲೆಯಲ್ಲಿ ಭಿಕ್ಷಾಟನೆ ಮಾಡುವವರ ಸಂಖ್ಯೆ ಹೆಚ್ಚಾಗಿರುವ ಕಾರಣ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಅವರನ್ನು ನಿರಾಶ್ರಿತರ ಕೇಂದ್ರಗಳಿಗೆ ಬಿಡುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.

ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ತಂದೆ; ಜೀವಾವಧಿ ಶಿಕ್ಷೆ ನೀಡಿದ ಕೋರ್ಟ್
ಪ್ರತಿ ಶಾಲೆಗಳಲ್ಲಿ ಮೀನಾ ತಂಡವನ್ನು ರಚನೆ ಮಾಡಲಾಗಿದೆ. ಇದರ ಮೂಲಕ ವಿದ್ಯಾರ್ಥಿಗಳಿಗೆ ಪೋಕ್ಸೊ ಹಾಗೂ ಬಾಲ್ಯವಿವಾಹ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಸಭೆಗೆ ಡಿಡಿಪಿಐ ಮಾಹಿತಿ ನೀಡಿದರು. ಮುಂದಿನ ಸಭೆಗೆ ಬರುವಾಗ ಯಾವ ಶಾಲೆಯಲ್ಲಿ ಎಷ್ಟು ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂಬುವುದರ ಮಾಹಿತಿಯನ್ನು ಸಿದ್ದಪಡಿಸಿ ತರಬೇಕು ಎಂದು ಸೂಚಿಸಿದರು.
ಜಿಲ್ಲೆಯ ಎಲ್ಲಾ ವಸತಿ ನಿಲಯಗಳ ಸಿಬ್ಬಂದಿ, ವಾರ್ಡನ್, ವಿದ್ಯಾರ್ಥಿಗಳಿಗೆ ಪೋಕ್ಸೊ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಮೌಢ್ಯಕ್ಕೆ ಹಸುಗೂಸು ಬಲಿ ಪ್ರಕರಣ; ಇಬ್ಬರ ವಿರುದ್ಧ ಎಫ್.ಐ.ಆರ್ ದಾಖಲು
ಜಿಲ್ಲೆಯ ಎಲ್ಲಾ ಶಾಲೆಗಳ ಶಿಕ್ಷಕರಿಗೆ ತಾಲ್ಲೂಕು ಮಟ್ಟದಲ್ಲಿ ಪೋಕ್ಸೊ ಕಾಯ್ದೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ನೂರುನ್ನಿಸಾ ಅವರು, ಜಿಲ್ಲೆಯಲ್ಲಿ ಪೋಕ್ಸೊ ಪ್ರಕರಣಗಳು ಮತ್ತು ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು.
ಪ್ರಸ್ತುತ ದಿನಗಳಲ್ಲಿ ಶಾಲೆ ಹಾಗೂ ಕಾಲೇಜು ಹಂತದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿವೆ. ಪೋಕ್ಸೊ ಕುರಿತು ಮಕ್ಕಳಿಗೆ ಅರಿವು ಮೂಡಿಸುವುದರ ಜೊತೆಗೆ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆಯೂ ತಿಳಿಸಬೇಕು. ಕೆಲವು ಶಿಕ್ಷಕರಿಗೆ ಪೋಕ್ಸೊ ಕಾಯ್ದೆ ಕುರಿತು ಸರಿಯಾದ ಮಾಹಿತಿ ಗೊತ್ತಿಲ್ಲದಿರುವುದು ವಿಪರ್ಯಾಸ. ಆದ್ದರಿಂದ ಅವರಿಗೆ ಮೊದಲು ಅರಿವು ಮೂಡಿಸಬೇಕು ಎಂದರು.


ಸಭೆಯಲ್ಲಿ ಡಿವೈಎಸ್ಪಿ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಡಿಹೆಚ್‍ಓ ಡಾ.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನುಷಾ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಗಂಗಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

About The Author

You May Also Like

More From Author

+ There are no comments

Add yours