ಪಡಿತರದಾರರು ಇ-ಕೆವೈಸಿ ಮಾಡಿಸಲು ಗಡುವು; ತಪ್ಪಿದಲ್ಲಿ ಕಾರ್ಡ್ ಅಮಾನತು

1 min read

ಪಡಿತರದಾರರು ಇ-ಕೆವೈಸಿ ಮಾಡಿಸಲು ಮನವಿ

Tumkurnews
ತುಮಕೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಗಳಲ್ಲಿನ ಫಲಾನುಭವಿಗಳು ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್’ನೊಂದಿಗೆ ತಮ್ಮ ತಮ್ಮ ನ್ಯಾಯಬೆಲೆ ಅಂಗಡಿಗೆ ತೆರಳಿ ಆಗಸ್ಟ್ 31ರೊಳಗೆ ಇ-ಕೆವೈಸಿ ಮಾಡಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳ ಸದಸ್ಯರುಗಳನ್ನು(ವಿನಾಯ್ತಿ ನೀಡಲಾದ ಪಡಿತರ ಚೀಟಿಗಳನ್ನು ಹೊರತುಪಡಿಸಿ) ಪಡಿತರ ಚೀಟಿಯಿಂದ ಅಮಾನತ್ತುಗೊಳಿಸಲಾಗುವುದು ಮತ್ತು ಈ ಫಲಾನುಭವಿಗಳಿಗೆ ಆಹಾರ ಧಾನ್ಯ ಹಾಗೂ ಡಿಬಿಟಿ ನಗದು ಸೌಲಭ್ಯವನ್ನು ಸೆಪ್ಟೆಂಬರ್-2023ರ ಮಾಹೆಯಿಂದ ಸ್ಥಗಿತಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

 

About The Author

You May Also Like

More From Author

+ There are no comments

Add yours