ಪಾವಗಡ ತಾಲ್ಲೂಕಿನಲ್ಲಿ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ
Tumkurnews
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ಪಾವಗಡ ತಾಲ್ಲೂಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ಪಾವಗಡ ತಾಲ್ಲೂಕಿನ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಮಧುಗಿರಿ V/S ತಿಪಟೂರು ಜಿಲ್ಲಾ ಕೇಂದ್ರ: ಮಹತ್ವದ ಘೋಷಣೆ ಮಾಡಿದ ಸಿಎಂ
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವರು, ಭಾರತ ಸರ್ಕಾರ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಎ. ನಾರಾಯಣಸ್ವಾಮಿ ಅವರು ಘನ ಉಪಸ್ಥಿತರಿರುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುವರು. ಪಾವಗಡ ವಿಧಾನಸಭಾ ಶಾಸಕ ಹೆಚ್.ವಿ. ವೆಂಕಟೇಶ್ ಅಧ್ಯಕ್ಷತೆ ವಹಿಸುವರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಯ್ಯ, ಲೋಕೋಪಯೋಗಿ ಇಲಾಖೆ ಸತೀಶ್ ಜಾರಕಿಹೊಳಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಗೌರವ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ವಿವಿಧ ಅಧಿಕಾರಿಗಳು ಭಾಗವಹಿಸುವರು.




+ There are no comments
Add yours