ತುಮಕೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಡಿ.ಕೆ.ಶಿವಕುಮಾರ್‍ ವಿರುದ್ಧ ಜೆಡಿಎಸ್ ಪ್ರತಿಭಟನೆ

1 min read

ಪೆನ್ ಡ್ರೈವ್ ಪ್ರಕರಣ: ಡಿ.ಕೆ.ಶಿವಕುಮಾರ್‍ ವಿರುದ್ಧ ಪ್ರತಿಭಟನೆ

Tumkurnews
ತುಮಕೂರು: ಪೆನ್‍ಡ್ರೈವ್ ಹಾಗೂ ಅಶ್ಲೀಲ ವಿಡಿಯೋ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕುಟುಂಬದ ವರ್ಚಸ್ಸು ಕುಂದಿಸಿ, ಹೆಣ್ಣುಮಕ್ಕಳ ಮಾನ ಹರಾಜು ಹಾಕುತ್ತಿರುವ ಪ್ರಕರಣದ ಹಿಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಹಾಗು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ಜಿಲ್ಲಾ ಜೆಡಿಎಸ್ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ: ವಿದೇಶಕ್ಕೆ ಪರಾರಿ?!
ಜಿಲ್ಲಾ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಮುಖಂಡರು, ನಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ ಮಾತನಾಡಿ, ಇತ್ತೀಚೆಗೆ ಇಡೀ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಲೈಂಗಿಕ ಹಗರಣ ಮತ್ತು ಅದನ್ನು ಪೆನ್‍ಡ್ರೈವ್ ಹಾಗೂ ಅಶ್ಲೀಲ ವಿಡಿಯೋ ಮೂಲಕ ರಾಜ್ಯಾದ್ಯಂತ ಹಂಚುತ್ತಾ ಸಂತ್ರಸ್ತ ಹೆಣ್ಣುಮಕ್ಕಳು ಹಾಗೂ ಅವರ ಕುಟುಂಬದವರ ಮಾನ ಕಳೆಯುತ್ತಿರುವ ಪ್ರಕರಣದ ಹಿಂದಿನ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ
ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯಾಗಿರುವ ಹೆಣ್ಣುಮಕ್ಕಳ ಅಶ್ಲೀಲ ವಿಡಿಯೋ, ಪೆನ್‍ಡ್ರೈವ್ ಹಂಚಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದರ ಹಿಂದಿನ ರೂವಾರಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಬುದು ಜಗಜನಿತವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ವಕೀಲ ದೇವರಾಜೇಗೌಡರು ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರಗಳನ್ನು ಬಹಿರಂಗಗೊಳಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಇಂತಹ ನೀಚ ಕೆಲಸಕ್ಕೆ ಇಳಿದಿರುವುದು ಖಂಡನೀಯ. ಹೆಣ್ಣುಮಕ್ಕಳ ರಕ್ಷಣೆ ಮಾಡಬೇಕಾದ, ಅವರ ಮಾನ ಕಾಪಾಡಬೇಕಾದವರೇ ಅವರ ಮಾನ ಹರಾಜು ಮಾಡುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ. ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಶಿಕ್ಷೆ ಆಗಬೇಕು ಎಂದು ಆರ್.ಸಿ.ಆಂಜನಪ್ಪ ಒತ್ತಾಯಿಸಿದರು.

ರೇವಣ್ಣ ಬಂಧನಕ್ಕೆ ಕ್ಷಣಗಣನೆ, ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ; ಪರಮೇಶ್ವರ್ ಹೇಳಿದ್ದೇನು?
ಈ ಚುನಾವಣೆ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವರ್ಚಸ್ಸು ಕುಂದಿಸಿ, ಜೆಡಿಎಸ್‍ಗೆ ಕಳಂಕ ತರುವುದು ಅವರ ಉದ್ದೇಶವಾಗಿದೆ. ಅಲ್ಲದೆ ಮೈತ್ರಿ ಪಕ್ಷವಾಗಿರುವ ಬಿಜೆಪಿಗೂ ಮುಜುಗರ ತರುವ ಪ್ರಯತ್ನ ನಡೆದಿದೆ ಎಂದು ಟೀಕಿಸಿದರು.
ಮಾಜಿ ಶಾಸಕ ಹೆಚ್.ನಿಂಗಪ್ಪ ಮಾತನಾಡಿ, ಲೈಂಗಿಕ ಹಗರಣವನ್ನು ಜೆಡಿಎಸ್ ನಾಯಕರ ತೇಜೋವಧೆಗೆ ಬಳಿಸಿಕೊಂಡು, ಸಂತ್ರಸ್ತ ಹೆಣ್ಣುಮಕ್ಕಳ ಮರ್ಯಾದೆ ಕಳೆಯುವ ಕೃತ್ಯದ ಹಿಂದಿರುವ, ಹೀನ ಕೃತ್ಯವೆಸಗಿರುವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವವರೆಗೂ ಜೆಡಿಎಸ್ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡುತ್ತದೆ ಎಂದರು.

ಎಚ್.ಡಿ ರೇವಣ್ಣ ಬಂಧನ! ನಿಜವಾಯ್ತು ‘ತುಮಕೂರು ನ್ಯೂಸ್’ ವರದಿ!!
ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು. ಪೆನ್‍ಡ್ರೈವ್ ಸೃಷ್ಟಿಕರ್ತರು ಹಾಗೂ ಅದರ ಹಂಚಿಕೆದಾರರ ವಿರುದ್ಧ ಈ ನೆಲದ ಕಾನೂನಿನ ಅನ್ವಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಪೆನ್‍ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳನ್ನು ಹಂಚಿ ಹೆಣ್ಣುಮಕ್ಕಳಿಗೆ ಅಪಮಾನ ಮಾಡಿದ ಕೃತ್ಯದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ದೇವೇಗೌಡರು, ಕುಮಾರಸ್ವಾಮಿಯವರ ಕುಟುಂಬವನ್ನು ತೇಜೋವಧೆ ಮಾಡುವ ನೀಚ ಕೆಲಸಕ್ಕಿಳಿದ ಡಿ.ಕೆ.ಶಿವಕುಮಾರ್ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ
ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ನಗರ ಅಧ್ಯಕ್ಷ ವಿಜಯ್‍ಗೌಡ, ಮುಖಂಡರಾದ ಗುಬ್ಬಿ ನಾಗರಾಜು, ಎಸ್.ಆರ್.ಗೌಡ, ಸೋಲಾರ್ ಕೃಷ್ಣಮೂರ್ತಿ, ಕೊಂಡವಾಡಿ ಚಂದ್ರಶೇಖರ್, ಟಿ.ಕೆ.ನರಸಿಂಹಮೂರ್ತಿ, ಹೆಚ್.ಡಿ.ಕೆ.ಮಂಜುನಾಥ್, ಟಿ.ಜಿ.ನರಸಿಂಹರಾಜು, ಮುದಿಮಡು ರಂಗಸ್ವಾಮಯ್ಯ, ದೊಡೇರಿ ಬಸವರಾಜು, ಲಕ್ಷ್ಮಮ್ಮ, ಲೀಲಾವತಿ, ತಾಹಿರಾಬಾನು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತುಮಕೂರು: ರೈತರಿಂದ ಸಾಲ ವಸೂಲಾತಿಗೆ ತಡೆ: ಜಿಲ್ಲಾಧಿಕಾರಿ ಆದೇಶ

About The Author

You May Also Like

More From Author

+ There are no comments

Add yours