ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಈ ತಪ್ಪು ಮಾಡಿದರೆ 6 ತಿಂಗಳು ಜೈಲು

1 min read

 

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಚುನಾವಣಾ ಕರಪತ್ರಗಳಲ್ಲಿ ಮುದ್ರಕರ ಹೆಸರು ಕಡ್ಡಾಯ

Tumkurnews
ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕರಪತ್ರಗಳಲ್ಲಿ ಮುದ್ರಕರ ಹೆಸರು ಹೊಂದಿರುವುದು ಕಡ್ಡಾಯವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನ್ಯತೆ ಪಡೆದ ರಾಜ್ಯ ಹಾಗೂ ರಾಷ್ಟ್ರೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 127-ಎ ಪ್ರಕಾರ ಮುದ್ರಣ ಮಾಡುವ ಚುನಾವಣಾ ಕರಪತ್ರಗಳು, ಪೋಸ್ಟರ್, ಪ್ಲಕಾರ್ಡ್‍ಗಳ ಮುಂಭಾಗದಲ್ಲಿ ಮುದ್ರಕ, ಪ್ರಕಾಶಕನ ಹೆಸರು, ವಿಳಾಸ ಹೊಂದಿರುವುದು ಕಡ್ಡಾಯ. ಚುನಾವಣೆಗೆ ಸಂಬಂಧಿಸಿದಂತೆ ಕೈಯಿಂದ ನಕಲು ಮಾಡುವುದನ್ನು ಹೊರತುಪಡಿಸಿ ಮುದ್ರಿಸುವ ಅಥವಾ ಯಾವುದೇ ಬಹುಗ್ರಾಫ್ ಮಾಡಲಾದ ಚುನಾವಣಾ ಕರಪತ್ರ, ಪೋಸ್ಟರ್‍’ಗಳ ಮುಂಭಾಗದಲ್ಲಿ ಮುದ್ರಕ, ಪ್ರಕಾಶಕನ ಹೆಸರು, ವಿಳಾಸ ಹೊಂದಿರುವುದು ಕಡ್ಡಾಯವೆಂದು ಚುನಾವಣಾ ಆಯೋಗದಿಂದ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಕರಪತ್ರಗಳ ಉದ್ದೇಶಿತ ಮುದ್ರಕ, ಪ್ರಕಾಶಕರಿಂದ ದೃಢೀಕರಣ(ದ್ವಿಪ್ರತಿಯಲ್ಲಿ) ಪತ್ರ ಹಾಗೂ ಮುದ್ರಕನನ್ನು ವೈಯಕ್ತಿಕವಾಗಿ ತಿಳಿದಿರುವ ಇಬ್ಬರು ವ್ಯಕ್ತಿಗಳಿಂದ ಸಹಿ ಮಾಡಲ್ಪಟ್ಟ ಗುರುತಿನ ದಾಖಲಾತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಆಯೋಗದ ನಿರ್ದೇಶನವನ್ನು ಉಲ್ಲಂಘಿಸಿದವರಿಗೆ 6 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 2000 ರೂ.ಗಳವರೆಗೆ ದಂಡ ಅಥವಾ ಎರಡೂ ದಂಡನೆಗೆ ಗುರಿಯಾಗಬೇಕಾಗುತ್ತದೆ. ಮುದ್ರಕರು ಮುದ್ರಿತ ವಸ್ತುಗಳ 4 ಪ್ರತಿಗಳನ್ನು ಹಾಗೂ ಮುದ್ರಣವಾದ 10 ದಿನಗಳೊಳಗೆ ಘೋಷಣೆಯನ್ನು ಸಲ್ಲಿಸಬೇಕು. ಕರಪತ್ರಗಳನ್ನು ರಾಜ್ಯ ರಾಜಧಾನಿಯಲ್ಲಿ ಮುದ್ರಿಸಿದ್ದರೆ ಮುದ್ರಕನು ರಾಜ್ಯದ ಮುಖ್ಯ ಚುನಾವಣಾಧಿಕಾರಿಗೆ ಹಾಗೂ ಜಿಲ್ಲೆಯಲ್ಲಿ ಮುದ್ರಿಸಿದ್ದರೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ತನ್ನ ಘೋಷಣಾ ಪತ್ರವನ್ನು ಸಲ್ಲಿಸಬೇಕು. ಘೋಷಣೆಯನ್ನು ಸಲ್ಲಿಸದಿದ್ದರೆ ನಿಬಂಧನೆಗಳ ಉಲ್ಲಂಘನೆ ಎಂದು ಪರಿಗಣಿಸಲಾಗುವುದು. ನಿಬಂಧನೆಗಳನ್ನು ಉಲ್ಲಂಘಿಸಿದವರ ಪರವಾನಗಿಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ: ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
ಚುನಾವಣೆ ಸಭೆಯ ದಿನಾಂಕ, ಸಮಯ, ಸ್ಥಳ ಮತ್ತಿತರ ವಿವರ ಅಥವಾ ಚುನಾವಣಾ ಏಜೆಂಟ್, ಕಾರ್ಯಕರ್ತರಿಗೆ ದಿನನಿತ್ಯದ ಸೂಚನೆಗಳನನು ಪ್ರಕಟಿಸುವ ಕರಪತ್ರ, ಫಲಕ ಅಥವಾ ಪೋಸ್ಟರ್‍’ಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲವೆಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ರೇಷ್ಮಾ, ಚುನಾವಣಾ ಶಿರಸ್ತೇದಾರ್ ಮಂಜುನಾಥ, ರವಿಕುಮಾರ್, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಇದ್ದರು.

ತುಮಕೂರು: ಜೆಸಿಬಿಗೆ ಅಡ್ಡ ನಿಂತ ಪೊಲೀಸ್! ಮುಂದೆ ಆಗಿದ್ದೇನು? ವಿಡಿಯೋ

About The Author

You May Also Like

More From Author

+ There are no comments

Add yours