ಬೆಳ್ಳಾವಿ ಹೋಬಳಿಯ 6 ಗ್ರಾಮಗಳಲ್ಲಿ ಬಂಡವಾಳ ಹೂಡಿಕೆ ಸ್ನೇಹಿ ವಾತಾವರಣ: ಡಿಸಿ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ವಾತಾವರಣ ಕಲ್ಪಿಸಲು ಡಿಸಿ ಸೂಚನೆ

Tumkurnews
ತುಮಕೂರು: ತಾಲ್ಲೂಕಿನ ಬೆಳ್ಳಾವಿ ಹೋಬಳಿಯ ಸೋರೆಕುಂಟೆ, ಪಿ.ಗೊಲ್ಲಹಳ್ಳಿ, ಪುರದಕುಂಟೆ, ಗೌಡನಹಳ್ಳಿ, ಲಿಂಗನಹಳ್ಳಿ, ಗಿರಿಯನಹಳ್ಳಿ ಸೇರಿದಂತೆ 6 ಗ್ರಾಮಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ ಪಡಿಸುತ್ತಿರುವ ಕೈಗಾರಿಕಾ ಪ್ರದೇಶದಲ್ಲಿ ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ವಾತಾವರಣವನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುಮಕೂರು: ನಿವೇಶನ ರಹಿತರಿಗೆ ಶುಭ ಸುದ್ದಿ: ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ
ಸೋರೆಕುಂಟೆ ಗ್ರಾಮ ವ್ಯಾಪ್ತಿಯಲ್ಲಿ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಬೃಹತ್ ಯೋಜನೆಯಡಿ ಕೈಗೊಂಡಿರುವ ಕೈಗಾರಿಕಾ ಪ್ರದೇಶಾಭಿವೃದ್ಧಿಯನ್ನು ಪರಿವೀಕ್ಷಿಸಲು ಭೇಟಿ ನೀಡಿ ಅವರು ಮಾತನಾಡಿದರು. ಬಂಡವಾಳ ಹೂಡಿಕೆದಾರರು ತಮ್ಮ ಕೈಗಾರಿಕೆಗಳನ್ನು ಸ್ಥಾಪಿಸಲು ಉತ್ತಮ ಸೌಲಭ್ಯಗಳಿರುವ ಪ್ರದೇಶಗಳಿಗೆ ಆದ್ಯತೆ ನೀಡುತ್ತಾರೆ. ಈ ನಿಟ್ಟಿನಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಉತ್ತಮ ರಸ್ತೆ, ನೀರು, ಚರಂಡಿ ವ್ಯವಸ್ಥೆ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ನಿರ್ದೇಶನ ನೀಡಿದರು.

ತುಮಕೂರು KSRTC ಹೊಸ ಬಸ್ ನಿಲ್ದಾಣ: ಕಾರ್ಯಾರಂಭಕ್ಕೂ ಮುನ್ನವೇ ಮಳೆ ನೀರು ಸೋರಿಕೆ! ವಿಡಿಯೋ
ಕೆಐಎಡಿಬಿ ಕಾರ್ಯನಿರ್ವಾಹಕ ಇಂಜಿನಿಯರ್ ಟಿ.ಎಸ್. ಲಕ್ಷ್ಮೀಶ್ ಮಾತನಾಡಿ, ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಉದ್ದೇಶಿತ 6 ಗ್ರಾಮಗಳ ಸುಮಾರು 1,722 ಎಕರೆ ವಿಸ್ತೀರ್ಣದಲ್ಲಿ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಕೈಗೊಳ್ಳಲಾಗಿದೆ. ಯೋಜನೆ ಅಭಿವೃದ್ಧಿಗಾಗಿ ನ್ಯಾಯಾಲಯ ಪ್ರಕರಣ ಹೊರತುಪಡಿಸಿ ಭೂಸ್ವಾಧೀನಪಡಿಸಿಕೊಂಡ ರೈತರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಯೋಜನೆಯ ಕಾಮಗಾರಿಯ ಗುತ್ತಿಗೆಯನ್ನು ಮೆ: ಎಲ್ ಅಂಡ್ ಟಿ ಕಂಪನಿ ವಹಿಸಿಕೊಂಡಿದೆ ಎಂದು ಮಾಹಿತಿ ನೀಡಿದರು.

ತುಮಕೂರು: ಉತ್ತಮ ಮಳೆ: 3 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆ ಗುರಿ
ಸ್ಥಳೀಯ ರೈತರಿಂದ ಡೀಸಿಗೆ ಅಹವಾಲು: ಸೋರೆಕುಂಟೆ ಗ್ರಾಮದ ಸರ್ವೆ ನಂಬರ್ 41/39 ಜಮೀನಿನ ಈಶ್ವರಯ್ಯ ಎಂಬ ರೈತ, ಕೆಐಎಡಿಬಿಯವರು ತನ್ನ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಜಮೀನಿನಲ್ಲಿರುವ ಕೊಳವೆ ಬಾವಿಗೆ ವರ್ಷಗಳಿಂದ ಅಲೆದಾಡುತ್ತಿದ್ದರೂ ಪರಿಹಾರ ನೀಡಿಲ್ಲ. ನ್ಯಾಯ ಒದಗಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಅಹವಾಲು ಸಲ್ಲಿಸಿದರು. ಸ್ಪಂದಿಸಿದ ಜಿಲ್ಲಾಧಿಕಾರಿ, ಇನ್ನೆರಡು ದಿನಗಳಲ್ಲಿ ಸದರಿ ರೈತಗೆ ಪರಿಹಾರ ಒದಗಿಸುವ ಕಾರ್ಯವಾಗಬೇಕು. ಸ್ವಾಧೀನಪಡಿಸಿಕೊಂಡ ಭೂ ಮಾಲೀಕರಿಗೆ ಪರಿಹಾರ ಬಾಕಿ ಉಳಿಸಿಕೊಳ್ಳದೆ ಶೀಘ್ರ ಪಾವತಿಸಲು ಕ್ರಮ ಕೈಗೊಳ್ಳಬೇಕು. ರೈತರ ವಿಶ್ವಾಸ ಗಳಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ತುಮಕೂರು: ಸಚಿವರಾದ ಡಾ.ಜಿ ಪರಮೇಶ್ವರ್, ಕೆ.ಎನ್ ರಾಜಣ್ಣ ರಾಜೀನಾಮೆ ನೀಡಲಿ
ಭೂಸ್ವಾಧೀನ ಸಮಸ್ಯೆಗಾಗಿ ಸಹಾಯವಾಣಿ:
ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆ ಕೈಗೊಂಡಿರುವ ಸೋರೆಕುಂಟೆ, ಪಿ.ಗೊಲ್ಲಹಳ್ಳಿ, ಪುರದಕುಂಟೆ, ಗೌಡನಹಳ್ಳಿ, ಲಿಂಗನಹಳ್ಳಿ, ಗಿರಿಯನಹಳ್ಳಿ ಗ್ರಾಮಗಳ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ರೈತರು ತಮ್ಮ ಸಮಸ್ಯೆ, ಅಹವಾಲುಗಳನ್ನು ಸಹಾಯವಾಣಿ ಸಂಖ್ಯೆ 0816-2213404ಕ್ಕೆ ಕರೆ ಮಾಡುವ ಮೂಲಕ ಸಲ್ಲಿಸಬಹುದು ಅಥವಾ ಮೇ 28ರಂದು ಬೆಳಿಗ್ಗೆ 11 ರಿಂದ 1 ಗಂಟೆಯೊಳಗಾಗಿ ಭೂಸ್ವಾಧೀನವಾಗಿರುವ ರೈತರು ಖುದ್ದಾಗಿ ಜಿಲ್ಲಾಧಿಕಾರಿಗಳಿಗೆ ಲಿಖಿತ ಅರ್ಜಿ ಮೂಲಕ ತಮ್ಮ ಸಮಸ್ಯೆಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ನಿಗಮದ ಹಿರಿಯ ವ್ಯವಸ್ಥಾಪಕ ರೋಹಿತ್ ಉಪಾಧ್ಯಾಯ್, ಕೆಐಎಡಿಬಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್’ಗಳಾದ ಪ್ರಸನ್ನ ಕುಮಾರ್, ರವಿಕುಮಾರ್ ಹಾಗೂ ಸಿಬ್ಬಂದಿ ವರ್ಗ, ಎಲ್ ಅಂಡ್ ಟಿ ಕಂಪನಿಯ ಮ್ಯಾನೇಜರ್ ಶ್ರೀಕಾಂತ್ ಸೇರಿದಂತೆ ಮತ್ತಿತರರು ಹಾಜರಿದ್ದರು.

About The Author

You May Also Like

More From Author

+ There are no comments

Add yours