ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ, ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಸೇರಿ ಹಲವರ ಬಂಧನ

1 min read

 

ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ, ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಸೇರಿ ಹಲವರ ಬಂಧನ

Tumkurnews
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟಕ್ಕೆ ತೆರಳುತ್ತಿದ್ದ ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ಗೊಲ್ಲಹಳ್ಳಿಯಲ್ಲಿರುವ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ನಿವಾಸದ ಎದುರು ಇಂದು ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯು ಪ್ರತಿಭಟನೆ ಹಮ್ಮಿಕೊಂಡಿತ್ತು.

ಈ ಪ್ರತಿಭಟನೆಗೆ ಆಗಮಿಸುತ್ತಿದ್ದ ಎಂ.ಟಿ ಕೃಷ್ಣಪ್ಪ ಅವರನ್ನು ಮಾರ್ಗಮಧ್ಯದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮುನ್ನ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ, ಗುಬ್ಬಿ ಕ್ಷೇತ್ರದ ಬಿಜೆಪಿ ಹಿರಿಯ ನಾಯಕ ಜಿ.ಎನ್ ಬೆಟ್ಟಸ್ವಾಮಿ ಸೇರಿದಂತೆ ಹಲವರನ್ನು ಪೊಲೀಸರು ಮುಂಜಾಗೃತ ಕ್ರಮವಾಗಿ ಬಂಧಿಸಿದ್ದಾರೆ.

ಸೊಗಡು ಶಿವಣ್ಣ ಬಂಧನ: ವಿಡಿಯೋ

About The Author

You May Also Like

More From Author

+ There are no comments

Add yours