ತುಮಕೂರು: ಜಿಲ್ಲಾಧಿಕಾರಿ ಕಚೇರಿ ಮುಂದೆ ಹಸು ಕಟ್ಟಿ, ಹಾಲು ಕರೆದು ಬಿಜೆಪಿ ಪ್ರತಿಭಟನೆ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಜಿಲ್ಲಾಧಿಕಾರಿ ಕಚೇರಿ ಮುಂದೆ ಹಸು ಕಟ್ಟಿ, ಹಾಲು ಕರೆದು ಪ್ರತಿಭಟನೆ

ಸರ್ಕಾರದ ರೈತ ವಿರೋಧಿ ನೀತಿಗೆ ಬಿಜೆಪಿ ರೈತ ಮೋರ್ಚಾ ಖಂಡನೆ

Tumkurnews
ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ರೈತ ವಿರೋಧಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಹಸುಗಳನ್ನು ಕಟ್ಟಿ, ಹಾಲು ಕರೆದು ಜಿಲ್ಲಾಧಿಕಾರಿಗಳಿಗೆ ಹಾಲು ನೀಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ತುಮಕೂರು: ಒಂದು ಮಗು ಅಪಹರಣ ಕೇಸ್ ಹಿಂದೆ ಹೋದ ಪೊಲೀಸರಿಂದ 9 ಮಕ್ಕಳ ರಕ್ಷಣೆ!: ಮಕ್ಕಳ ಕಳ್ಳರ ಜಾಲ ಪತ್ತೆ
ಹಾಲು ಉತ್ಪಾದಕರಿಗೆ ನೀಡಬೇಕಾಗಿರುವ 900 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ಬಿಡುಗಡೆ ಸೇರಿದಂತೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೆ ರಾಸುಗಳನ್ನು ತರುವುದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ಹೋರಾಟಗಾರರಿಗೆ ಮಣಿದ ಪೊಲೀಸರು ಹಸುಗಳನ್ನು ತರಲು ಅವಕಾಶ ಮಾಡಿಕೊಟ್ಟರು.

ತುಮಕೂರು: ಅಟ್ಟಿಕಾ ಬಾಬು ಬಂಧನ: ಕೇಸ್ ಏನು ಗೊತ್ತೇ?
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಅರಿವೇಸಂದ್ರ ಸಿದ್ದರಾಮಯ್ಯ ಮೊದಲಾದವರು ಹಸುಗಳಿಂದ ಹಾಲು ಕರೆದು, ಜಿಲ್ಲಾಧಿಕಾರಿಗಳಿಗೆ ಹಾಲು ಹಾಗೂ ಮನವಿಪತ್ರ ನೀಡಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನವಿರೋಧಿ ನೀತಿಗಳನ್ನೇ ಅನುಸರಿಸಿಕೊಂಡು ಬರುತ್ತಿದೆ, ಅದರ ವಿರುದ್ಧ ಬಿಜೆಪಿ ಬೀದಿಗಿಳಿದು ನಿರಂತರ ಹೋರಾಟ ಮಾಡಿಕೊಂಡೇ ಬರುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಜಾರಿಗೆ ತಂದಿದ್ದ ಅನೇಕ ಯೋಜನೆಗಳನ್ನು ಈ ಸರ್ಕಾರ ಸ್ಥಗಿತಗೊಳಿಸಿದೆ. ಯಾವುದೇ ಯೋಜನೆ ಅನುಷ್ಠಾನ ಮಾಡದೆ ರೈತರಿಗೆ ವಿಷವುಣಿಸಿ ಬದುಕಲಾರದ ಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ಹೇಳಿದರು.

ತುಮಕೂರು: ಕೆ.ಎಸ್.ಆರ್.ಟಿ.ಸಿಯಿಂದ ಸಹಾಯವಾಣಿ ಸ್ಥಾಪನೆ
ಹಾಲು ಉತ್ಪಾದಕರಿಗೆ ಕೊಡಬೇಕಾಗಿರುವ 900 ಕೋಟಿ ರೂ. ಪ್ರೋತ್ಸಾಹಧನ ನೀಡಿಲ್ಲ, ಚುನಾವಣೆ ಸಂದರ್ಭದಲ್ಲಿ ಎರಡು ಕಂತಿನ ಗೃಹಲಕ್ಷಿ ಹಣ ಹಾಕಲು ಸರ್ಕಾರದ ಬಳಿ ದುಡ್ಡು ಇತ್ತು, ಹಾಲಿನ ಪ್ರೋತ್ಸಾಹ ಧನ ನೀಡಲು ಇರಲಿಲ್ಲವೆ ಎಂದು ಪ್ರಶ್ನಿಸಿದರು.
ರೈತರಿಗೆ ನೀಡಬೇಕಾದ ಹಾಲಿನ ಬೆಲೆಯನ್ನು ಕಮ್ಮಿ ಮಾಡಿದೆ, ಗ್ರಾಹಕರ ಖರೀದಿ ಬೆಲೆಯನ್ನು ಹೆಚ್ಚು ಮಾಡಿ ಎರಡೂ ವರ್ಗಕ್ಕೆ ಸರ್ಕಾರ ಅನ್ಯಾಯ ಮಾಡಿದೆ. ಈ ಸರ್ಕಾರಕ್ಕೆ ಯಾರ ಹಿತವೂ ಬೇಕಾಗಿಲ್ಲ, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ಗಳನ್ನು ಬೇನಾಮಿ ಅಕೌಂಟ್‍ಗಳಿಗೆ ವರ್ಗಾವಣೆ ಮಾಡಿಕೊಂಡು ಚುನಾವಣೆಗೆ ಬಳಿಸಿಕೊಂಡು ಪರಿಶಿಷ್ಟ ವರ್ಗಕ್ಕೆ ಮೋಸ ಮಾಡಿದೆ. ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ದೂರಿದದರು.

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಹುದ್ದೆ: ಅರ್ಜಿ ಆಹ್ವಾನ
ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ ರೈತರಿಗೆ ನೀಡುವ 6 ಸಾವಿರ ರೂ. ಜೊತೆಗೆ ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಕೊಡುತ್ತಿದ್ದ 4 ಸಾವಿರ ರೂ. ಗಳನ್ನು ಈ ಸರ್ಕಾರ ನಿಲ್ಲಿಸಿದೆ. 900 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದೆ. ಗ್ರಾಹಕರಿಗೆ ಹಾಲಿನ ದರ ಹೆಚ್ಚಳ ಮಾಡಿದೆ, ಹಾಲು ಉತ್ಪಾದಕರಿಗೆ ಲೀಟರ್ ಹಾಲಿಗೆ 1.40 ರೂ. ದರ ಕಡಿಮೆ ಮಾಡಿದೆ. ಬಿತ್ತನೆ ಬೀಜದ ಬೆಲೆ ಏರಿಕೆ 70ರಷ್ಟು ಹೆಚ್ಚಾಗಿದೆ. ರೈತರ ಮಕ್ಕಳಿಗೆ ಅನುಕೂಲವಾಗುತ್ತಿದ್ದ ರೈತ ವಿದ್ಯಾನಿಧಿ ಯೋಜನೆ ನಿಲ್ಲಿಸಲಾಗಿದೆ. ಟ್ರಾನ್ಸ್ ಫಾರ್ಮಾರ್‍’ಗೆ ದುಪ್ಪಟ್ಟು ಹಣ ನೀಡಬೇಕಾಗಿದೆ ಎಂದು ಹೇಳಿದರು.

ವಾಯು ಸೇನೆಯಲ್ಲಿ ಅಗ್ನಿವೀರ್: ವಾಯು ಹುದ್ದೆಗೆ ಅರ್ಜಿ ಆಹ್ವಾನ
ಪೆಟ್ರೋಲ್, ಡೀಸೆಲ್ ಬೆಲೆ, ಮುದ್ರಾಂಕ ಶುಲ್ಕ ದರ, ಆಸ್ತಿ ನೋಂದಣಿ ಶುಲ್ಕ ಶೇಕಡ 30ರಷ್ಟು ಹೆಚ್ಚಾಗಿದೆ. ಎಲ್ಲಾ ಪದಾರ್ಥಗಳ ಬೆಲೆ ಏರಿಸಿ, ರೈತರ ಯೋಜನೆಗಳನ್ನು ಸ್ಥಗಿತಗೊಳಿಸಿ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 824 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರದಲ್ಲಿ ರೈತರಿಗೆ ಉಳಿಗಾಲವಿಲ್ಲದಂತಾಗಿದೆ. ಸರ್ಕಾರ ಇದೇ ಧೋರಣೆ ಮುಂದುವರೆಸಿದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದರು.
ರೈತ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಮಾತನಾಡಿ, ಕಿವಿ, ಮೂಗು, ಕಣ್ಣು ಇಲ್ಲದ ನಿರ್ಲಜ್ಜ ಸರ್ಕಾರ ರಾಜ್ಯದಲ್ಲಿದೆ. ಸಿದ್ದರಾಮಯ್ಯ ಸರ್ಕಾರದ ಕಾಂಗ್ರೆಸ್ ನಾಯಕರಿಗೆ ಅಧಿಕಾರ ಉಳಿಸಿಕೊಳ್ಳುವುದರ ಹೊರತು ಜನರ ಸಂಕಷ್ಟ ಬೇಕಾಗಿಲ್ಲ, ರೈತರ ಎಲ್ಲಾ ಯೋಜನೆಗಳಿಗೆ ಕತ್ತರಿ ಹಾಕಿರುವ ಸರ್ಕಾರ ರೈತರ ಮೇಲೆ ಗದಾಪ್ರಹಾರ ಮಾಡುತ್ತಿದೆ. ಮಾನವೀಯತೆ ಇಲ್ಲದ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡುವುದು, ಸಾರ್ವಜನಿಕರ ಹಣ ಕೊಳ್ಳೆ ಹೊಡೆಯುವುದನ್ನೇ ಕಾಯಕ ಮಾಡಿಕೊಂಡಿದೆ ಎಂದು ಟೀಕಿಸಿದರು.

ಕೆ.ಎನ್ ರಾಜಣ್ಣ ಹೇಳಿಕೆ: ಕಾಂಗ್ರೆಸ್, ಸರ್ಕಾರವನ್ನು ಲೇವಡಿ ಮಾಡಿದ ಶಾಸಕ ಸುರೇಶ್ ಗೌಡ
ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಿ.ಅರಿವೇಸಂದ್ರ ಸಿದ್ದರಾಮಯ್ಯ, ಪ್ರಧಾನ ಕಾರ್ಯದರ್ಶಿ ರವೀಂದ್ರ, ನಗರ ಅಧ್ಯಕ್ಷ ಸತ್ಯಮಂಗಲ ಜಗದೀಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಂಗರಾಜು, ಸಂದೀಪ್‍ಗೌಡ, ಹಾಲೇಗೌಡ, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಜ್ಯೋತಿ ತಿಪ್ಪೇಸ್ವಾಮಿ, ಜಿಲ್ಲಾ ಖಜಾಂಚಿ ಡಾ.ಪರಮೇಶ್, ನಗರ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಓಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ, ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಯು.ಆರ್.ವೆಂಕಟೇಶ್, ನಗರ ಅಧ್ಯಕ್ಷ ಬಂಬೂ ಮೋಹನ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ರೈತ ಮೋರ್ಚಾ ಮುಖಂಡರಾದ ತಿಮ್ಮಣ್ಣ, ವೆಂಕಟೇಗೌಡ, ನಾಗರಾಜು, ತಿರುಮಲೇಶ್, ಮುಖಂಡರಾದ ರುದ್ರೇಶ್, ಶ್ರೀನಿವಾಸ್, ಗಣೇಶ್‍ಪ್ರಸಾದ್, ಜಿ.ಎಸ್.ನಂದಿನಾಥ್, ಪುರುಷೋತ್ತಮ್, ಹನುಮಂತರಾಜು, ಆದ್ಯಾ, ಲತಾ, ಜಯಶ್ರೀ, ಶಬ್ಬೀರ್ ಅಹ್ಮದ್, ರಾಮಚಂದ್ರರಾವ್ ಮೊದಲಾದವರು ಭಾಗವಹಿಸಿದ್ದರು.

ತುಮಕೂರು: ಪತ್ರಕರ್ತನ ಕೊಲೆಗೆ ಸಂಚು, ಸುಪಾರಿ: ಮೂವರ ಬಂಧನ

About The Author

You May Also Like

More From Author

+ There are no comments

Add yours