ತುಮಕೂರು: ಡೆಂಗ್ಯೂಗೆ ಜಿಲ್ಲೆಯಲ್ಲಿ ಮೊದಲ ಬಲಿ: 19 ವರ್ಷದ ಯುವತಿ ಮೃತ್ಯು

1 min read

 

ಡೆಂಗ್ಯೂಗೆ ಜಿಲ್ಲೆಯಲ್ಲಿ ಮೊದಲ ಬಲಿ: ಮೂರು ಆಸ್ಪತ್ರೆ ಸುತ್ತಿದರೂ ಗುಣವಾಗಲಿಲ್ಲ

Tumkurnews
ತುಮಕೂರು: ಮಾರಕ ಡೆಂಗ್ಯೂಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, ಗುಣಶ್ರೀ(19) ಡೆಂಗ್ಯೂವಿನಿಂದಾಗಿ ಮೃತಪಟ್ಟಿದ್ದಾಳೆ.

ತುಮಕೂರು: ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ: ತೀವ್ರ ತರಾಟೆ
ತುಮಕೂರು ನಗರದ ಶಾಂತಿನಗರ ಕುಂಟಯ್ಯನ ತೋಟ ಬಡಾವಣೆಯ ನಿವಾಸಿ ರಾಜು ಎಂಬುವರ ಪುತ್ರಿ ಗುಣಶ್ರೀಗೆ ಜುಲೈ 12ರಂದು ಜ್ವರ ಕಾಣಿಸಿಕೊಂಡಿತ್ತು. ಪೋಷಕರು ಈಕೆಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಿದ್ದರು.
ಗುಣವಾಗದ ಹಿನ್ನೆಲೆಯಲ್ಲಿ ಜುಲೈ 17ಕ್ಕೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಜುಲೈ 18ರಂದು ಹೆಚ್ಚಿನ ಚಿಕಿತ್ಸೆಗಾಗಿ ಸಿದ್ಧಗಂಗಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಭಾನುವಾರ ಸಂಜೆ ಗುಣಶ್ರೀ ಕೊನೆಯುಸಿರೆಳೆದಿದ್ದಾಳೆ. ಆರೋಗ್ಯ ಇಲಾಖೆಯು ಡೆಂಗ್ಯೂವಿನಿಂದ ಮೃತಪಟ್ಟಿರುವ ಬಗ್ಗೆ ತಡವಾಗಿ ದೃಢಪಡಿಸಿದೆ.

ತುಮಕೂರು: ಶಿಕ್ಷಕರಿಗೆ ಜಿಪಂ ಸಿಇಒ ತರಾಟೆ

About The Author

You May Also Like

More From Author

+ There are no comments

Add yours