ತುಮಕೂರು: 24ರಂದು 10 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್

1 min read

 

24ರಂದು 10 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್

Tumkurnews
ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 24 ರಂದು ಜಿಲ್ಲೆಯ 10 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಈ ಅದಾಲತ್‍ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 24ರಂದು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ; ತುರುವೇಕೆರೆ ತಾಲೂಕಿನ ಸಂಪಿಗೆ ಹೊಸಹಳ್ಳಿ; ತಿಪಟೂರು ತಾಲೂಕಿನ ಹೊನ್ನವಳ್ಳಿ; ಮಧುಗಿರಿ ತಾಲ್ಲೂಕಿನ ಬಿಜವರ; ತುಮಕೂರು ತಾಲೂಕಿನ ಸೊರೆಕುಂಟೆ; ಚಿಕ್ಕನಾಯಕನಹಳ್ಳಿ ತಾಲೂಕಿನ ಹೊಯ್ಸಳಕಟ್ಟೆ; ಕುಣಿಗಲ್ ತಾಲ್ಲೂಕಿನ ಸಂತೆಮಾವತ್ತೂರು; ಕೊರಟಗೆರೆ ತಾಲೂಕಿನ ತೀತಾ; ಪಾವಗಡ ತಾಲೂಕಿನ ಸಿದ್ದಾಪುರ; ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಸೇರಿ 10 ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‍ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ.

About The Author

You May Also Like

More From Author

+ There are no comments

Add yours