cool hit counter

ತುಮಕೂರು: ಸಾರ್ಥಕ ಸೇವೆಗಳ ಸಮರ್ಪಣೆ: ಮೇ 19ರಂದು ಮುಖ್ಯಮಂತ್ರಿಗಳ ಕಾರ್ಯಕ್ರಮ: ಜಿ. ಪರಮೇಶ್ವರ

Tumkur News
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues,...
2 Min Read

ಸಾರ್ಥಕ ಸೇವೆಗಳ ಸಮರ್ಪಣೆ: ಮೇ 19ರಂದು ಮುಖ್ಯಮಂತ್ರಿಗಳ ಕಾರ್ಯಕ್ರಮ: ಡಾ: ಜಿ. ಪರಮೇಶ್ವರ

Tumkur news
ತುಮಕೂರು: ಮೇ 20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 3 ವರ್ಷಗಳು ತುಂಬಲಿದ್ದು, ಈ ದಿನ ತುಮಕೂರಿನಲ್ಲಿ ರಾಜ್ಯದ ಜನತೆಗೆ ಆಗಿರುವ ಪ್ರಯೋಜನಗಳ ಸೌಲಭ್ಯ ವಿತರಣೆ ಕಾರ್ಯಕ್ರಮವಾಗಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಅದಕ್ಕೆ ಮುನ್ನಾ ದಿನ ಮೇ 19ಕ್ಕೆ ಅಧಿಕೃತವಾಗಿ ಕಾರ್ಯಕ್ರಮ ನಿಗದಿಯಾಗಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ತಿಳಿಸಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹತ್ತಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಚಾಲನೆ ನೀಡಿ ಅವುಗಳನ್ನು ಆದ್ಯತಾ ಕಾರ್ಯಕ್ರಮಗಳಾಗಿ ತೆಗೆದುಕೊಂಡು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಈ ವಿಷಯವನ್ನು ಜನ ಸಮುದಾಯದೊಂದಿಗೆ ಹಂಚಿಕೊಳ್ಳಬೇಕಿತ್ತು, ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 2ನೇ ಅವಧಿಯ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಸಂಧ ಹಿನ್ನೆಲೆಯಲ್ಲಿ ಆ ದಿನದಂದು ಕಾರ್ಯಕ್ರಮ ಆಯೋಜಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬೇಡಿಕೆ ಈಡೇರಿಸುವಂತೆ ಅಂದೇ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ಅದಕ್ಕೆ ಮುನ್ನಾ ದಿನ ಮೇ 19ರಂದೇ ಕಾರ್ಯಕ್ರಮ ಆಯೋಜಿಸಲು ಮಾನ್ಯ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಾಂಕ ಮಾತ್ರ ಬದಲಾಗಿದೆ. ಉಳಿದಂತೆ ಎಲ್ಲ ಕಾರ್ಯಕ್ರಮಗಳು ಪೂರ್ವ ಯೋಜಿತದಂತೆ ನಡೆಯಲಿವೆ ಎಂದು ಅವರು ವಿವರಿಸಿದರು.
ಪ್ರಮುಖವಾಗಿ ಕಂದಾಯ ಇಲಾಖೆಯಲ್ಲಿ ಬಹುಕಾಲದಿಂದ ಜಮೀನು ವಾರಸುದಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕಳೆದ ಒಂದೂವರೆ ವರ್ಷದಲ್ಲಿ ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಅಭೂತಪೂರ್ವ ಅಭಿವೃದ್ಧಿ ಕೆಲಸಗಳು ನಡೆದಿದ್ದು, ಮೇ 19ರ ಕಾರ್ಯಕ್ರಮದಲ್ಲಿ ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿದಂತೆ ಸುಮಾರು 1,52,492 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 14ಲಕ್ಷ ಜನರಿಗೆ ಈ ಸೌಲಭ್ಯಗಳು ದೊರೆತಿವೆ ಎಂದು ಅವರು ತಿಳಿಸಿದರು.
ಅಲ್ಲದೆ, ತುಮಕೂರು ಜಿಲ್ಲೆಯಲ್ಲಿ ಆಗಿರುವ ಇತರೆ ಇಲಾಖೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಸುಮಾರು 682 ಕೋಟಿ ರೂ.ಗಳ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿಕೊಡಲಿದ್ದಾರೆ ಎಂದು ಸಚಿವರು ತಿಳಿಸಿದರು.
ಈ ಕಾರ್ಯಕ್ರಮ ಸಂಪೂರ್ಣ ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತ ಕಾರ್ಯಕ್ರಮ ಎಂದು ಈ ಹಿಂದೆಯೇ ತಿಳಿಸಲಾಗಿತ್ತು. ಅಂತೆಯೇ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲಾ ಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಮುಖಂಡರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು 2ಲಕ್ಷಕ್ಕೂ ಹೆಚ್ಚು ಜನ ಆಗಮಿಸಲಿದ್ದು, ಅವರಿಗೆ ಬಸ್ಸುಗಳ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ ಉಪಸ್ಥಿತರಿದ್ದರು.

ತುಮಕೂರು: ದಯಾ ಮರಣ ಕೇಳಿದ್ದ ಮಹಿಳೆಗೆ ತಾತ್ಕಾಲಿಕ ನೆರವು: ಕ್ಷಮೆ ಯಾಚಿಸಿದ ಮಹಿಳೆ

Share This Article
Follow:
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues, politics, social developments, and ground-level reporting, he has built a reputation for delivering accurate and impactful stories that connect with the common people. He actively covers current affairs, civic issues, crime reports, political events, cultural programs, and human-interest stories with a commitment to ethical journalism. His reporting style focuses on clarity, credibility, and public awareness, making his work relatable and informative to readers across Karnataka. Ashok R.P. believes journalism is a powerful medium to raise public voice and strengthen democracy through responsible reporting and factual storytelling. Special Interests: * Regional & Political News * Public Interest Stories * Social Awareness Reporting * Ground Reality Journalism * Digital Media & News Publishing
Leave a Comment