cool hit counter

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

Tumkur News
Tumkur News
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues,...
3 Min Read
Spread the love

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

Tumkurnews.in
ತುಮಕೂರು: ಬರುವ ನವೆಂಬರ್ ಮಾಹೆಯ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಜಿಲ್ಲೆಯ ಗುಬ್ಬಿ ತಾಲೂಕು ಕಂಚಿಗಾನಹಳ್ಳಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಪ್ಯಾಕೇಜ್ 11ರ ಕಾಮಗಾರಿ ಸ್ಥಳಕ್ಕೆ ಗುರುವಾರ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ರಾಜ್ಯದ ಮಹತ್ವಾಕಾಂಕ್ಷಿ ಎತ್ತಿನಹೊಳೆ ನೀರಾವರಿ ಯೋಜನೆ ಮೂಲಕ ತುಮಕೂರಿಗೆ ನೀರು ಹರಿಸಲು ಸರ್ಕಾರ ಪಣತೊಟ್ಟಿದೆ. ಕಾಮಗಾರಿ ಸ್ಥಳದಲ್ಲಿ ಎದುರಾಗಿರುವ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಸಚಿವರು ತ್ವರಿತ ಹೆಜ್ಜೆ ಇಡಲಾಗುವುದು ಎಂದು ತಿಳಿಸಿದರು.
ಕಂಚಿಗಾನಹಳ್ಳಿಯ ಅರಣ್ಯ ಇಲಾಖೆಗೆ ಸೇರಿದ 1.9 ಕಿ.ಮೀ ಜಾಗವನ್ನು ಪರಿಶೀಲಿಸಿದ ಅವರು, ಯೋಜನೆಗೆ ಅಗತ್ಯವಿರುವ ಅರಣ್ಯ ಇಲಾಖೆಯ 2ನೇ ಹಂತದ ಅನುಮತಿಗೆ ಸಂಬಂಧಿಸಿದ ಕಡತಗಳು ಈಗಾಗಲೇ ನವದೆಹಲಿಗೆ ತಲುಪಿವೆ ಎಂದು ಸ್ಪಷ್ಟಪಡಿಸಿದರಲ್ಲದೆ, ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ದೆಹಲಿಗೆ ಅರ್ಜಿ ಸಲ್ಲಿಸಿದ್ದು, ಸತತ ಪ್ರಯತ್ನದ ಫಲವಾಗಿ ಇನ್ನೊಂದು ವಾರದಲ್ಲಿ ಕೇಂದ್ರದಿಂದ ಅಂತಿಮ ಒಪ್ಪಿಗೆ(ಕ್ಲಿಯರೆನ್ಸ್) ದೊರೆಯುವ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.
ಗುರುತ್ವಾಕರ್ಷಣಾ ಕಾಲುವೆ (ಗ್ರಾವಿಟಿ ಕೆನಾಲ್) ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಅತ್ಯುನ್ನತ ಆದ್ಯತೆ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಿದರು.
ಕಾಮಗಾರಿ ಸ್ಥಳದಲ್ಲಿ 28 ಮೀಟರ್ ಆಳದ ಭೂಮಿಯನ್ನು ಅಗೆಯ(ಡೀಪ್ ಕಟ್)ಬೇಕಾಗಿದ್ದು, ಇಲ್ಲಿ ಮಣ್ಣು ಕುಸಿಯದಂತೆ ಅತ್ಯಂತ ಎಚ್ಚರಿಕೆಯಿಂದ ಕಟ್ ಅಂಡ್ ಕವರ್ ತಂತ್ರಜ್ಞಾನದ ಮೂಲಕ ಗುಣಮಟ್ಟದ ಕೆಲಸ ನಡೆಯಬೇಕು ಎಂದು ನಿರ್ದೇಶಿಸಿದರು.
ಮಣ್ಣನ್ನು ತಾತ್ಕಾಲಿಕವಾಗಿ ಹೊರಹಾಕಲು ಹೆಚ್ಚುವರಿಯಾಗಿ ನೀಡಿರುವ 10 ಎಕರೆ ಜಾಗದಲ್ಲೇ ಹಾಕಿ, ತದನಂತರ ಅದೇ ಮಣ್ಣನ್ನು ಮರಳಿ ತುಂಬುವ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ಎರಡೂ ಕಡೆ ಕಾಲುವೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಅಕ್ಟೋಬರ್ 15ರೊಳಗಾಗಿ ತುಮಕೂರು ಭಾಗದ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಹಾಗೂ ಶೇ.100ರಷ್ಟು ನೀರು ಪೂರೈಸುವುದು ನಿಶ್ಚಿತ ಎಂದು ಅವರು ಭರವಸೆ ನೀಡಿದರು.
ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಎತ್ತಿನಹೊಳೆ ಯೋಜನೆಯು ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲೇ ಪ್ರಾರಂಭಗೊಂಡ ಕನಸಿನ ಯೋಜನೆ ಎಂಬುದನ್ನು ಸ್ಮರಿಸಿದರು. ಆರಂಭದಲ್ಲಿ 8 ಸಾವಿರ ಕೋಟಿ ರೂಪಾಯಿಗಳಷ್ಟಿದ್ದ ಯೋಜನಾ ವೆಚ್ಚವು ಪ್ರಸ್ತುತ 23 ಸಾವಿರ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಆದಾಗ್ಯೂ, ರೈತರ ಹಿತದೃಷ್ಟಿಯಿಂದ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ಇದರ ಜೊತೆಗೆ, ಅನಿವಾರ್ಯ ಕಾರಣಗಳಿಂದ ವಿಳಂಬವಾಗಿದ್ದ ‘ಬಿಕ್ಕೆಗುಡ್ಡ ಯೋಜನೆ’ಯನ್ನೂ ಸಹ ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಹೇಮಾವತಿ ಲಿಂಕ್ ಕೆನಾಲ್ ಕೈಬಿಡುವಂತೆ ಬಂದಿರುವ ರೈತರ ಮನವಿ ಕುರಿತು ಅತ್ಯಂತ ಸೂಕ್ಷ್ಮ ಹಾಗೂ ಜವಾಬ್ದಾರಿಯುತವಾಗಿ ಪ್ರತಿಕ್ರಿಯಿಸಿದ ಸಚಿವರು, “ತುಮಕೂರು ಮತ್ತು ರಾಮನಗರ ಎರಡೂ ಭಾಗದ ರೈತರು ನಮಗೆ ಸಮಾನರು. ಎಲ್ಲರೂ ನಮ್ಮವರೇ ಆಗಿರುವುದರಿಂದ, ಯಾರೊಬ್ಬರಿಗೂ ಅನ್ಯಾಯವಾಗದಂತೆ ಮುಖ್ಯಮಂತ್ರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಎಲ್ಲರಿಗೂ ಒಳಿತಾಗುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.
ಇದೇ ವೇಳೆ ರೈತರ ಆರ್ಥಿಕ ಶೋಷಣೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ರೈತರು ಯಾವುದೇ ಕಾರಣಕ್ಕೂ ಮೈಕ್ರೋ ಫೈನಾನ್ಸ್(ಕಿರು ಸಾಲ) ಮೊರೆ ಹೋಗಬಾರದು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದ ಬಗ್ಗೆ ಬೆರಳೆಣಿಕೆಯಷ್ಟು ಮಂದಿ ಮಾತ್ರ ದೂರು ನೀಡುತ್ತಿದ್ದು, ಲಿಖಿತ ದೂರುಗಳಿಲ್ಲದೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಸರ್ಕಾರಕ್ಕೆ ಕಷ್ಟಕರವಾಗುತ್ತದೆ. ಹೀಗಾಗಿ ರೈತರು ಇಂತಹ ಸಾಲದ ಸುಳಿಗೆ ಸಿಲುಕದೆ ಎಚ್ಚರಿಕೆಯಿಂದ ಇರಬೇಕು ಎಂದು ಸಚಿವರು ಮನವಿ ಮಾಡಿದರು.
ಈ ವೇಳೆ ಗುಬ್ಬಿ ಕ್ಷೇತ್ರದ ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share This Article
Follow:
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues, politics, social developments, and ground-level reporting, he has built a reputation for delivering accurate and impactful stories that connect with the common people. He actively covers current affairs, civic issues, crime reports, political events, cultural programs, and human-interest stories with a commitment to ethical journalism. His reporting style focuses on clarity, credibility, and public awareness, making his work relatable and informative to readers across Karnataka. Ashok R.P. believes journalism is a powerful medium to raise public voice and strengthen democracy through responsible reporting and factual storytelling. Special Interests: * Regional & Political News * Public Interest Stories * Social Awareness Reporting * Ground Reality Journalism * Digital Media & News Publishing
Leave a Comment