ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯಲ್ಲ! ಯಾಕೆ? ಏನಾಯಿತು? ಇಲ್ಲಿದೆ ಮಾಹಿತಿ
ರಾಜ್ಯ ಸರ್ಕಾರಕ್ಕೆ ಮೂರು ವರ್ಷ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನ ಹೈ ಸ್ಕೂಲ್ ಫೀಲ್ಡ್’ನಲ್ಲಿ ಸಾಧನಾ ಸಮಾವೇಶ: ಸಮಾವೇಶದಲ್ಲಿ ಭಾರೀ ಬದಲಾವಣೆ
Tumkur news
ತುಮಕೂರು: ರಾಜ್ಯ ಸರ್ಕಾರಕ್ಕೆ ಮೂರು ವರ್ಷ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಬದಲಾವಣೆಯಾಗಿದೆ.
ಈ ಹಿಂದೆ ಮೇ 20ರಂದು ತುಮಕೂರಿನಲ್ಲಿ ಸರ್ಕಾರದ ಮೂರು ವರ್ಷಗಳ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಶುಕ್ರವಾರ ಈ ದಿನಾಂಕವನ್ನು ದಿಢೀರ್ ಬದಲಾಯಿಸಲಾಗಿದೆ. ಮೇ 20ರ ಬದಲಾಗಿ ಒಂದು ದಿನ ಮುಂಚಿತವಾಗಿ ಮೇ 19ಕ್ಕೆ ನಿಗದಿಪಡಿಸಲಾಗಿದೆ. ಮೇ 20ರಂದು ಕೆ.ಎಸ್.ಆರ್.ಟಿ.ಸಿ ಮುಷ್ಕರ ಇರುವ ಹಿನ್ನೆಲೆಯಲ್ಲಿ ಸಮಾವೇಶವನ್ನು ಮೇ 19ಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿದು ಬಂದಿದೆ.
