ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಹೆಚ್ಚಳದ ಸುಳಿವು ನೀಡಿದ ನಿಗಮದ ಅಧ್ಯಕ್ಷ
Tumkur news
ತುಮಕೂರು: ಕೇಂದ್ರ ಸರ್ಕಾರವು ಇಂಧನದ ಬೆಲೆ ಏರಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಏರಿಕೆ ಆಗಲಿದೆ ಎಂದು ನಿಗಮದ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಇದೇ ರೀತಿಯಲ್ಲಿ ಬೆಲೆ ಏರಿಕೆ ಮಾಡುತ್ತಿದ್ದರೆ ನಾವು ಬಸ್ ಅನ್ನು ನೀರಿನಲ್ಲಿ ಓಡಿಸಲು ಆಗುತ್ತದೆಯೇ, ನಾವು ಕೂಡ ಜಾಸ್ತಿ ಮಾಡಬೇಕಲ್ಲವೇ ಎಂದು ಪ್ರಶ್ನಿಸಿದರು.
