Tumkurnews
ತುಮಕೂರು; ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇರುಸು, ಮುರುಸು ಉಂಟಾಗುತ್ತಿದೆ. ಆದರೆ ಯಾರೂ ಹೆದರುವ ಅಗತ್ಯವಿಲ್ಲ, ಕಾಂಗ್ರೆಸ್ ಅಲ್ಪಸಂಖ್ಯಾತರ ಪರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ನಗರದ ಗಾಜಿನಮನೆಯಲ್ಲಿ ಭಾನುವಾರ ನಡೆದ ಅಲ್ಪಸಂಖ್ಯಾತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರು ಈ ದೇಶಕ್ಕಾಗಿ ದುಡಿದಿದ್ದಾರೆ, ಬಸವಣ್ಣ, ಕನಕದಾಸರು, ಕುವೆಂಪು, ಶಿಶುನಾಳ ಷರೀಪ್ ಅವರು ಬಾಳಿದ ನಾಡಿನಲ್ಲಿ ಯಾರೂ ಹೆದರಬಾರದು ಎಂದರು.
RSS, ಬಜರಂಗದಳ, VHP ಬಗ್ಗೆ ಅಲ್ಪಸಂಖ್ಯಾತರು ಎಚ್ಚರಿಕೆಯಿಂದ ಇರಬೇಕು; ಸಿದ್ದರಾಮಯ್ಯ
ಬಿಜೆಪಿ ಅಭಿವೃದ್ಧಿ ಮಾಡಿದ್ದರೆ ಅದನ್ನು ಹೇಳಿಕೊಳ್ಳುತ್ತಿದ್ದರು. ಆದರೆ, ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ರಾಜಕಾರಣ ಮಾಡಲಾರಂಭಿಸಿದೆ. ಜನರು ಎಚ್ಚೆತ್ತುಕೊಂಡು ಈ ಸರಕಾರವನ್ನು ಕಿತ್ತೊಗೆಯಬೇಕು. ಉದಯಪುರದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಮುಂದಾಗುವ ಸಂಕಲ್ಪ ಮಾಡಲಾಗಿದೆ, ಜನರೂ ಬದಲಾವಣೆ ಬಯಸುತ್ತಿದ್ದು, ಕಾಂಗ್ರೆಸ್ ಪರವಾದ ಅಲೆ ಸೃಷ್ಟಿಯಾಗುತ್ತಿದೆ. ಸರ್ವಜನಾಂಗವೂ ಒಂದೇ ಎಂಬ ಭಾವನೆ ಇಟ್ಟುಕೊಂಡು ಕಾಂಗ್ರೆಸ್ ಕೆಲಸ ಮಾಡುತ್ತಿದೆ, ಅಲ್ಪಸಂಖ್ಯಾತರನ್ನು ಎಲ್ಲಾ ವಲಯಗಳಲ್ಲಿ ರಕ್ಷಣೆ ಮಾಡುವ ಕೆಲಸದಲ್ಲಿ ಕಾಂಗ್ರೆಸ್ ಇರಲಿದೆ ಎಂದು ಭರವಸೆ ನೀಡಿದರು.
+ There are no comments
Add yours