ಸಚಿವ ಬಿ.ಸಿ ನಾಗೇಶ್ ಮನೆ ಎದುರು ನಿಜಕ್ಕೂ ನಡೆದಿದ್ದೇನು?; ಇಲ್ಲಿದೆ ವಿಡಿಯೋ

1 min read

 

Tumkurnews
ತಿಪಟೂರು; ಶಿಕ್ಷಣ ಸಚಿವ ಬಿ.ಸಿ‌ ನಾಗೇಶ್ ನಿವಾಸಕ್ಕೆ ಬೆಂಕಿ ಹಚ್ಚುವ ಯತ್ನದ ಆರೋಪದ ಮೇಲೆ 15 ಮಂದಿ ಎನ್.ಎಸ್.ಯು.ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಶಿಕ್ಷಣ ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚುವ ಯತ್ನ; 15 ಮಂದಿ ಪೊಲೀಸ್ ವಶಕ್ಕೆ
ಸ್ವತಃ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎನ್.ಎಸ್.ಯು.ಐ ಕಾರ್ಯಕರ್ತರ ಕೃತ್ಯವನ್ನು ಖಂಡಿಸಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ನಿಜಕ್ಕೂ ಸಚಿವ ಬಿ.ಸಿ ನಾಗೇಶ್ ನಿವಾಸದ ಎದುರು ಏನು ನಡೆಯಿತು? ನಿಜಕ್ಕೂ ಮನೆಗೆ ಬೆಂಕಿ ಹಚ್ಚುವ ಯತ್ನ ನಡೆದಿತೇ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.

‘ಜನೌಷಧಿ’ ದುರ್ಬಲಗೊಳಿಸುವ ಯತ್ನ; ಸಂಸದರ ಎದುರೇ ಆರಗ ಜ್ಞಾನೇಂದ್ರ ಅಸಮಾಧಾನ

ಏನಾಯಿತು?; ಪ್ರತಿಭಟನೆ ವೇಳೆ ಎನ್.ಎಸ್.ಯು.ಐ ಕಾರ್ಯಕರ್ತರು ಬಿ.ಸಿ ನಾಗೇಶ್ ವಿರುದ್ಧ ಘೋಷಣೆಯನ್ನು ಕೂಗಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸುವ ಭರದಲ್ಲಿ ಬಿ.ಸಿ ನಾಗೇಶ್ ಹಾಗೂ ಆರ್.ಎಸ್.ಎಸ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇದೇ ವೇಳೆ ಆರ್.ಎಸ್.ಎಸ್ ಸಮವಸ್ತ್ರವಾದ ಖಾಕಿ ಚೆಡ್ಡಿಗೆ ಬೆಂಕಿ ಹಚ್ಚಿದ್ದಾರೆ. ಆಗ ಸ್ಥಳದಲ್ಲಿದ್ದ ಪೊಲೀಸರು ಬೆಂಕಿ ನಂದಿಸಿ, ಪ್ರತಿಭಟನಾಕಾರರನ್ನು ಚದುರಿಸುವ ಯತ್ನ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

(ಘಟನೆಯ ವಿಡಿಯೋ)

ಪಠ್ಯ ಪುಸ್ತಕ ವಿಚಾರದಲ್ಲಿ ಅಸಹಿಷ್ಣುತೆ ಮೇರೆ ಮೀರುತ್ತಿದೆ; ಆರಗ ಜ್ಞಾನೇಂದ್ರ

About The Author

You May Also Like

More From Author

+ There are no comments

Add yours