Tumkur News
ಮಡಿಕೇರಿ: ಅಕ್ರಮವಾಗಿ ಗಾಂಜಾ ಮತ್ತು ಎಂಡಿಎಂಎ ಮಾದಕ ಪದಾರ್ಥವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದಾರೆ.
ವೀರಾಜಪೇಟೆ ಅಮ್ಮತ್ತಿ ಗ್ರಾಮದ ನಿವಾಸಿ ಕುಟ್ಟಂಡ ಬೋಪಣ್ಣ (42) ಪಿರಿಯಪಟ್ಟಣ ತಾಲೂಕು ಪಂಚವಳ್ಳಿ ನಿವಾಸಿ ಜಬಿವುಲ್ಲಾ ಖಾನ್ (41), ಕಡಂಗ ಅರಪಟ್ಟು ಗ್ರಾಮದ ನಿವಾಸಿ ಕೆ.ಎಸ್.ಫರೀದ್ (22), ಕೊಟ್ಟಮುಡಿ ಗ್ರಾಮದ ನಿವಾಸಿ ಎಂ.ಕೆ.ಹೈದರ್ ಆಲಿ ಅಲಿಯಾಸ್ ಆಲಿಶಾಜ್ (24) ಹಾಗೂ ಅಮ್ಮತ್ತಿ ಕಾವಾಡಿ ಗ್ರಾಮದ ನಿವಾಸಿ ಕೆ.ವಿ.ಸುನೀಲ್ (26) ಬಂಧಿತರು.
ಪಿಎಸ್ಐ ನೇಮಕಾತಿ ಪ್ರಕರಣ; ಪಿಎಸ್ಐ ಹರೀಶ್ ಬಂಧನ
ಬಂಧಿತರಿಂದ 760 ಗ್ರಾಂ. ಗಾಂಜಾ ಮತ್ತು 15.5 ಗ್ರಾಂ. ಮಾದಕ ಪದಾರ್ಥ, 3,700 ರೂ. ನಗದು, ಅಕ್ರಮಕ್ಕೆ ಬಳಸಿದ್ದ 5 ಮೊಬೈಲ್ ಫೋನ್, ಎರಡು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.
+ There are no comments
Add yours