Tumkurnews
ತುಮಕೂರು; ರಾಜ್ಯದಲ್ಲಿ ವೈದ್ಯರ ಕೊರತೆ ಇಲ್ಲ, ಆದರೆ ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ಸಿಬ್ಬಂದಿ ಕಡಿಮೆ ಇದ್ದಾರೆ. ಅದರ ನೇಮಕಾತಿಗಾಗಿ ಹಣಕಾಸು ಇಲಾಖೆಗೆ ಬರೆದಿದ್ದೇವೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.
ತುಮಕೂರು; ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ತುಮಕೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸು ಇಲಾಖೆಯ ಅನುಮೋದನೆ ಸಿಕ್ಕ ತಕ್ಷಣ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತೇವೆ ಎಂದು ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದರು.
ಕಾರವಾರದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಅಲ್ಲಿ ಒಂದು ಮೆಡಿಕಲ್ ಕಾಲೇಜು ಇದೆ. ಅವರು ಕೇಳುತ್ತಿರುವುದು ಟ್ರಾಮ್ ಸೆಂಟರ್. ಮೆಡಿಕಲ್ ಕಾಲೇಜಿನಲ್ಲಿ ಟ್ರಾಮ್ ಸೆಂಟರ್ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದ ಅವರು, ಕುಮಟಾದಲ್ಲಿ ಪ್ರಾಥಮಿಕ ಮತ್ತು ಸಮುದಾಯ ಚಿಕಿತ್ಸಾ ಕೇಂದ್ರವನ್ನು ಕುಮಟಾದ ಗೋಕರ್ಣದಲ್ಲಿ ಮಾಡುತ್ತೇವೆ ಎಂದು ತಿಳಿಸಿದರು.
ರೈಲ್ವೆ ಇಲಾಖೆಯಲ್ಲಿ ಉದ್ಯೋಗ; 1659 ಹುದ್ದೆಗಳಿಗೆ ಅರ್ಜಿ ಆಹ್ವಾನ
+ There are no comments
Add yours