Tumkurnews
ಚಿಕ್ಕಮಗಳೂರು; ಯುವ ಕಾಂಗ್ರೆಸ್ ನಾಯಕ ಕಾರ್ತಿಕ್ ಜಿ.ಚೆಟ್ಟಿಯಾರ್(33) ಅನಾರೋಗ್ಯದ ನಿಮಿತ್ತ ಗುರುವಾರ ನಿಧನರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಹಾಗೂ ಹಲವು ಜವಬ್ದಾರಿ ನಿರ್ವಹಿಸಿದ್ದ ಅವರು ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್’ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಅನಾರೋಗ್ಯ ಉಲ್ಬಣಿಸಿ, ಇಂದು ಕೊನೆಯುಸಿರೆಳೆದಿದ್ದಾರೆ. ಕಾರ್ತಿಕ್ ಅವರ ನಿಧನಕ್ಕೆ ಗಣ್ಯರು, ಪಕ್ಷದ ಕಾರ್ಯಕರ್ತರು ಸೇರಿದಂತೆ ಅಪಾರ ಸ್ನೇಹಿತ ಬಳಗ ಕಂಬನಿ ಮಿಡಿದಿದೆ.
+ There are no comments
Add yours