ತುಮಕೂರು(ಜು.6) Tumkurnews.in
ಆರೋಗ್ಯ ಸಿಬ್ಬಂದಿಗಳು ಕೊರೋನಾ ವೈರಸ್ ಬಗ್ಗೆ ಭಯಪಡದೇ ದೇಶಸೇವೆ ಎಂದು ಭಾವಿಸಿ ಸೋಂಕಿನ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಮನವಿ ಮಾಡಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಸೋಂಕು ತಡೆಗಟ್ಟುವಲ್ಲಿ ಆರೋಗ್ಯ ಸಿಬ್ಬಂದಿಗಳು ಬಹಳಷ್ಟು ಶ್ರಮಿಸುತ್ತಿದ್ದಾರೆ. ಶುಶ್ರೂಕಿಯರು ಭಯಭೀತರಾಗಿ ಕೆಲಸವನ್ನು ಬಿಡುತ್ತಿದ್ದಾರೆ ಎಂಬ ಮಾಹಿತಿಯಿದೆ. ಆರೋಗ್ಯ ಸಿಬ್ಬಂದಿಗಳು ಯಾವುದೇ ಆತಂಕಕ್ಕೊಳಗಾಗದೆ ದೇಶಸೇವೆ ಎಂದು ಪರಿಗಣಿಸಿ ಸಂಕಷ್ಟ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಸೋಂಕಿನ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
+ There are no comments
Add yours