ಹಳ್ಳಿಗಳಿಗೆ ಹೋಗಿ ಫೋಟೋ ವಾಟ್ಸಾಪ್ ಮಾಡಿ; ಪಶು ವೈದ್ಯರಿಗೆ ಸಚಿವ ಪ್ರಭು ಚವ್ಹಾಣ್ ಸೂಚನೆ

1 min read

ತುಮಕೂರು(ಜು.6) Tumkurnews.in

ಜಾನುವಾರುಗಳ ರಕ್ಷಣೆಗಾಗಿ ಪ್ರತಿ ಜಿಲ್ಲೆಗೆ ಅಂಬುಲೆನ್ಸ್
ಗಳನ್ನು ನೀಡುತ್ತಿದ್ದು ಈಗಾಗಲೇ ಖರೀದಿಸಲಾಗಿದ್ದು, ಶೀಘ್ರದಲ್ಲಿ ಜಿಲ್ಲೆಗಳಿಗೆ ನೀಡಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಬಿ ಚವ್ಹಾಣ್ ತಿಳಿಸಿದರು.
ನಗರದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರೀಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ವೈದ್ಯರು ಹಳ್ಳಿಗಳಿಗೂ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಪರಿಹರಿಸಬೇಕು. ನಿತ್ಯ ಹಳ್ಳಿಗಳಿಗೆ ಭೇಟಿ ನೀಡಿದ ಕೆಲಸದ ಫೋಟೊ ಹಾಗೂ ವಿವರವನ್ನು ವಾಟ್ಸಾಪ್ ಮೂಲಕ ನನಗೆ ಕಳುಹಿಸಬೇಕು.
ಕಸಾಯಿ ಖಾನೆಗಳಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವ ದೂರು ಬಂದಿರುತ್ತವೆ. ಅಧಿಕಾರಿಗಳು ತಡೆಯಬೇಕು ಎಂದರು.

About The Author

You May Also Like

More From Author

+ There are no comments

Add yours