ತುಮಕೂರು(ಜು.11) tumkurnews.in
ತುಮಕೂರು ಜಿಲ್ಲೆಯಲ್ಲಿ ಚಿರತೆ ದಾಳಿಗೆ ನಾಲ್ಕು ವರ್ಷದ ಗಂಡು ಮಗು ಬಲಿಯಾಗಿರುವ ಘಟನೆ ಶನಿವಾರ ನಡೆದಿದೆ.
ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿಯ ರಾಜೇನಹಳ್ಳಿ ಗ್ರಾಮದ ಬುಡಕಟ್ಟು ನಿವಾಸಿ ಮುನಿರಾಜು ಎಂಬುವರ ಮಗುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿದೆ.
ಮಗುವಿನ ಹೆಸರು ಚಂದ್ರು ಎಂದಾಗಿದ್ದು, ಮನೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಚಿರತೆ ದಾಳಿ ನಡೆಸಿ ಹೊತ್ತೊಯ್ದಿದೆ. ಗ್ರಾಮಸ್ಥರು ರಕ್ಷಣೆಗೆ ಧಾವಿಸುವಷ್ಟರಲ್ಲಿ ಮಗು ಮೃತ ಪಟ್ಟಿದ್ದು, ಶವವನ್ನು ಬಿಟ್ಟು ಚಿರತೆ ಪರಾರಿಯಾಗಿದೆ.
(ಸಾಂದರ್ಭಿಕ ಚಿತ್ರ)
+ There are no comments
Add yours