ತುಮಕೂರು ನ್ಯೂಸ್.ಇನ್ (ಜು.13) tumkurnews.in
ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ 20 ವರ್ಷದ ಕೋವಿಡ್-19 ಸೋಂಕಿತೆಗೆ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ಹೆರಿಗೆಯಾಗಿದೆ.
ಮೊದಲ ಗರ್ಭಧಾರಣೆಯಾಗಿದ್ದರಿಂದ ಕುಟುಂಬ ಸದಸ್ಯರು ಸಹಜವಾಗಿಯೇ ಆತಂಕಕ್ಕೆ ಈಡಾಗಿದ್ದರು. ಮುಖ್ಯವಾಗಿ ವೈದ್ಯರು ಈ ಪರಿಸ್ಥಿತಿಯಲ್ಲಿ ಹೇಗೆ ಹೆರಿಗೆ ಮಾಡುತ್ತಾರೆ ಎಂಬ ಚಿಂತೆ ಕಾಡಿತ್ತು.
ಆದರೆ, ‘ವೈದ್ಯೋ ನಾರಾಯಣ ಹರಿಃ’ ಎಂಬಂತೆ ವೈದ್ಯರು ಯಾವುದೇ ಅಡೆತಡೆ ಇಲ್ಲದೇ ಸುಸೂತ್ರವಾಗಿ ಹೆರಿಗೆ ಮಾಡಿದ್ದಾರೆ.
‘ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ’ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ತಿಳಿಸಿದ್ದಾರೆ.
‘ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲಾಯಿತು. ಹೆಣ್ಣು ಮಗು ಜನನವಾಗಿದ್ದು, ಆರೋಗ್ಯವಾಗಿದೆ. ಸ್ತ್ರೀರೋಗ ತಜ್ಞೆ ಡಾ.ಮಹಾಲಕ್ಷ್ಮಮ್ಮ, ಅರಿವಳಿಕೆ ತಜ್ಞ ಡಾ. ಸುರೇಶಬಾಬು ಮತ್ತು ತಂಡದವರು ಈ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಇದು ಮೊದಲ ಕೋವಿಡ್-19 ಸೋಂಕಿತ ಗರ್ಭಿಣಿಗೆ ಮಾಡಿದ ಸಿಸೇರಿಯನ್ ಶಸ್ತ್ರಚಿಕಿತ್ಸೆ ಹೆರಿಗೆಯಾಗಿದೆ’ ಎಂದು ಅವರು ತಿಳಿಸಿದ್ದಾರೆ. ಈ ವೈದ್ಯರ ಕಾರ್ಯಕ್ಕೊಂದು ಸಲಾಂ ಹೇಳಿ.
+ There are no comments
Add yours