ತುಮಕೂರು ನ್ಯೂಸ್.ಇನ್
(ಜು.14) tumkurnews.in
ರಾಜ್ಯದಲ್ಲಿ ವಸತಿ ಯೋಜನೆಗಳ ಕುರಿತಾದ ಮಹತ್ವದ ಮಾಹಿತಿಗಳನ್ನು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ಬಹಿರಂಗ ಪಡಿಸಿದರು.
ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ವಸತಿ ಯೋಜನೆಯಡಿ 20 ಸಾವಿರ ಕೋಟಿ ಮೌಲ್ಯದ ಮನೆಗಳನ್ನು ಮಂಜೂರು ಮಾಡಿ, 1 ಸಾವಿರ ಕೋಟಿ ರೂ.ಗಳನ್ನು ಸರಕಾರ ಬಿಡುಗಡೆ ಮಾಡಿತ್ತು. ನಮ್ಮ ಸರ್ಕಾರದಲ್ಲಿ ಅರ್ಹರಿಗೆ ವಸತಿ ಸೌಲಭ್ಯ ಸಿಗಬೇಕು ಎನ್ನುವ ಉದ್ದೇಶದಿಂದ ಪಾರದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಿರ್ಮಾಣದ ವಿವಿಧ ಹಂತಗಳಲ್ಲಿರುವ 5.40 ಲಕ್ಷ ಮನೆಗಳು ಪೂರ್ಣಗೊಳಿಸಲು 6 ಸಾವಿರ ಕೋಟಿ ಅಗತ್ಯವಿದೆ. ಕೋವಿಡ್ ಸಂಕಷ್ಟದ ಮಧ್ಯೆಯೂ 400 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ನಾನು ವಸತಿ ಸಚಿವ ಆದ ಮೇಲೆ ಫಲಾನುಭವಿಗಳಿಗೆ 1200 ಕೋಟಿ ರೂ.ಗಳನ್ನು ಖಾತೆಗೆ ವರ್ಗಾಯಿಸುವ ಕೆಲಸ ಕೆಲವೇ ದಿನಗಳಲ್ಲಿ ಆಗಲಿದೆ ಎಂದು ಅವರು ತಿಳಿಸಿದರು.
ಇದಕ್ಕೂ ಮುನ್ನ ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಮತ್ತಿತರರು ಹಾಜರಿದ್ದರು.
+ There are no comments
Add yours