Tumkurnews
ಕೊರಟಗೆರೆ; ಹೆಜ್ಜೇನು ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ತುಮಕೂರಿನಲ್ಲಿ ಕುರುಬರ ಜಾಗೃತಿ ಸಮಾವೇಶ; ಸಿದ್ದರಾಮಯ್ಯ ಭಾಗಿ
ತಾಲೂಕಿನ ಇರಕಸಂದ್ರ ಕಾಲೋನಿಯ ಎಸ್ಸಾರ್ ಪೆಟ್ರೋಲ್ ಬಂಕ್ ಬಳಿ ಘಟನೆ ಸಂಭವಿಸಿದ್ದು, ಹೆಜ್ಜೇನು ದಾಳಿಯಿಂದ ಗ್ರಾಪಂ ನಿವೃತ್ತ ಕಾರ್ಯದರ್ಶಿ ಹುಲವಂಗಲ ಗ್ರಾಮದ ಕೃಷ್ಣಮೂರ್ತಿ(65) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಪುಟ್ಟಸಂದ್ರದ ಸೋಮಣ್ಣ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮತ್ತಿಬ್ಬರು ಗಾಯಾಳುಗಳಾದ ಸಂಕೇನಹಳ್ಳಿ ಗ್ರಾಮದ ಜಯಪ್ರಕಾಶ ಮತ್ತು ಶರತ್ ಎಂಬುವವರನ್ನು ಕೊರಟಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತದಾರರ ಗುರುತಿನ ಚೀಟಿ ವಿತರಣೆಗೆ ಗ್ರಹಣ; ಕಾರಣ ಕ್ಷುಲ್ಲಕ!
ಎಸ್ಸಾರ್ ಪೆಟ್ರೋಲ್ ಬಂಕಿನ ಸಮೀಪದ ಆಲದ ಮರದಲ್ಲಿದ್ದ ನಾಲ್ಕು ಹೆಜ್ಜೇನು ಗೂಡುಗಳಿದ್ದು, ಜೇನು ನೊಣಗಳು ಏಕಾಏಕಿ ಜನರ ಮೇಲೆ ದಾಳಿ ಮಾಡಿವೆ. ಸ್ಥಳಕ್ಕೆ ಕೊರಟಗೆರೆ ತಹಸೀಲ್ದಾರ್ ನಹೀದಾ, ಕೋಳಾಲ ಪಿಎಸೈ ಮಹಾಲಕ್ಷ್ಮಿ ಭೇಟಿ ನೀಡಿದ್ದು, ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ನ್ಯಾಯಾಂಗವನ್ನು ಬಿಜೆಪಿ ಪಕ್ಷ ನಡೆಸುವುದಿಲ್ಲ; ಡಿಕೆಶಿಗೆ ಬಿಜೆಪಿ ಟಾಂಗ್
ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
+ There are no comments
Add yours