Tumkur News
ಮಂಡ್ಯ: ಭಗ್ನ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿಗೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ಹಾಸಿಗೆ ಹಿಡಿದಿದ್ದ ಪತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತ್ನಿ
ಕಾಲೇಜು ಬಿಡುವರೆಗೂ ಹೊಂಚು ಹಾಕಿ ಹೊರಬರುತ್ತಿದ್ದಂತೆ ಯುವಕ ಯುವತಿಯನ್ನು ಹಲ್ಲೆ ಮಾಡಿದ್ದಾನೆ. ಅಲ್ಲಿನ ಸಾರ್ವಜನಿಕರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.
ವೈ.ಯರಹಳ್ಳಿ ಗ್ರಾಮದ ನವ್ಯಾ(20) ಹಲ್ಲೆಗೊಳಗಾದ ವಿದ್ಯಾರ್ಥಿನಿಯಾಗಿದ್ದು, ಪ್ಯಾರಾ ಮೆಡಿಕಲ್ ಓದುತ್ತಿದ್ದಳು. ಸಂಪತ್ ಕುಮಾರ್ ಒಂದೇ ಗ್ರಾಮದ ನವ್ಯಾ ಇಬ್ಬರೂ 2 ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿ ವಿಚಾರ ತಿಳಿದ ನವ್ಯಾಳ ತಂದೆ ರಮೇಶ್ ಬುದ್ದಿ ಮಾತು ಹೇಳಿದ್ದರು.
ಯುವಕಿ ಸಂಪತ್ ಕುಮಾರ್ ಜತೆ ಅಂತರ ಕಾಯ್ದುಕೊಂಡಿದ್ದಳು. ಆದರೂ ಪದೇ ಪದೇ ಪ್ರೀತಿಸುವಂತೆ ಸಂಪತ್ ಪೀಡಿಸುತ್ತಿದ್ದ. ನವ್ಯಾ ಸ್ನೇಹಿತರ ಜೊತೆ ಬರ್ತಡೇ ಆಚರಿಸಿಕೊಂಡಿದ್ದು, ತನ್ನ ಜತೆ ಬಾರದೇ ಸ್ನೇಹಿತರ ಜತೆ ಬರ್ತಡೇ ಮಾಡಿಕೊಂಡಿದ್ದಕ್ಕೆ ನವ್ಯಾ ಮನೆಗೆ ಹೋಗಿ ಗಲಾಟೆ ಮಾಡಿದ್ದ.
ನನ್ನ ಅವಶ್ಯಕತೆ ಅವರಿಗಿಲ್ಲ ಎಂದುಕೊಂಡಿದ್ದೇನೆ; ಎಸ್.ಆರ್. ಶ್ರೀನಿವಾಸ್ ಹೇಳಿಕೆ
ಯುವಕ ಇಬ್ಬರು ಜತೆಯಲ್ಲಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದನು. ಆಗಲೂ ನವ್ಯಾ ತಂದೆ ಬೈದು ಬುದ್ಧಿ ಮಾತು ಹೇಳಿ ಕಳುಹಿಸಿದ್ದರು. ಗುರುವಾರ ಬೆಳಗ್ಗೆಯಿಂದಲೂ ಕಾಲೇಜು ಬಳಿಯೇ ಹೊಂಚು ಹಾಕಿ ಕೂತಿದ್ದ ಸಂಪತ್, ಹಲ್ಲೆ ನಡೆಸುವುದಕ್ಕಾಗಿಯೇ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್ ನಲ್ಲಿ ರಿಪೀಸ್ ಬಟ್ಟಿ ತಂದಿದ್ದ.
ತುಮಕೂರು ಜಿಲ್ಲಾ ಕಾರಾಗೃಹದಲ್ಲಿ ಅವ್ಯವಸ್ಥೆ; ಗೊತ್ತಾದ್ರೆ ನಿಮಗೂ ಆಶ್ಚರ್ಯ!
ಸಂಜೆ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ಏಕಾಏಕಿ ಯುವಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನವ್ಯಾಳನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೋಯ್ದಿದ್ದರು. ಸರ್ವಜನಿಕರು ಹಲ್ಲೆ ನಡೆಸಿದ ಸಂಪತ್ ನನ್ನು ಹಿಗ್ಗಾಮುಗ್ಗ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಪ್ರಕರಣ ಮಂಡ್ಯದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
+ There are no comments
Add yours