Tumkur News
ಜಾಹಿರಾತಿನಲ್ಲಿ ತಪ್ಪು ಮಾಹಿತಿ ನೀಡಿ, ವೀಕ್ಷಕರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವ್ಯಕ್ತಿಯೊಬ್ಬರು ಖ್ಯಾತ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ಅಂಬರ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿರುವ ಕೋತಾ ಉಪೇಂದ್ರ ರೆಡ್ಡಿ, ಇಂತಹ ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಗಂಡ್ಸಾದ್ರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ; ಎಚ್ಡಿಕೆಗೆ ಸವಾಲೆಸೆದ ಎಸ್.ಆರ್. ಶ್ರೀನಿವಾಸ್
ಅಲ್ಲು ಅರ್ಜುನ್ ಜೂ. 6 ರಂದು ಚೈತನ್ಯ ಶಿಕ್ಷಣ ಸಂಸ್ಥೆಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಈ ಜಾಹೀರಾತಿನಲ್ಲಿ ನೀಡಿದ ಐಐಟಿ ಮತ್ತು ಎನ್ಐಟಿಗಳ ಶ್ರೇಯಾಂಕಗಳ ಬಗ್ಗೆ ಮಾಹಿತಿ ತಪ್ಪಾಗಿತ್ತು. ಇದನ್ನು ಪರಿಶೀಲಿಸದೇ ಅಲ್ಲು ಅರ್ಜುನ್ ತಪ್ಪು ಮಾಹಿತಿ ನೀಡಿದ್ದಾರೆ. ಈ ರೀತಿಯ ಜಾಹೀರಾತು ದಾರಿ ತಪ್ಪಿಸುವ ಹಾಗೂ ಸಮಾಜಕ್ಕೆ ತಪ್ಪು ಮಾಹಿತಿ ನೀಡುತ್ತಿದೆ. ಹೀಗಾಗಿ ಶಿಕ್ಷಣ ಸಂಸ್ಥೆ ಮತ್ತು ಅಲ್ಲು ಅರ್ಜುನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
+ There are no comments
Add yours