Tumkur News
ಕುಣಿಗಲ್: ಉಪನೋಂದಣಾಧಿಕಾರಿ ಕಚೇರಿ ಕಿಟಕಿಯ ಸರಳು ಮುರಿದು, ಕಳ್ಳತನಕ್ಕೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
ಬುಧವಾರ ತಡ ತಡರಾತ್ರಿ ಕಚೇರಿಯ ಕಿಟಕಿ ಕಬ್ಬಿಣ ಮುರಿದು ಕಚೇರಿ ಒಳಗೆ ಪ್ರವೇಶಿಸಿ ಬೀರು ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿದ್ದಾರೆ. ನಗದು ಸಿಗದ ಕಾರಣ ಬಂದ ದಾರಿಗೆ ಸುಂಕವಿಲ್ಲದಂತೆ ಕಳ್ಳರು ತೆರಳಿದ್ದಾರೆ. ಗುರುವಾರ ಉಪನೊಂದಣಾಧಿಕಾರಿ ಯಶೋಧ ಕಚೇರಿಗೆ ಆಗಮಿಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
+ There are no comments
Add yours