Tumkur News
ತುಮಕೂರು: ಬೇಡ ಜಂಗಮ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಉತ್ತರ ಕರ್ನಾಟಕ ಭಾಗದಿಂದ ನೂರಾರು ವಾಹನಗಳಲ್ಲಿ ಪ್ರತಿಭಟನಾಕಾರರು ಬೆಂಗಳೂರಿಗೆ ತೆರಳುತ್ತಿದ್ದು, ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಾರ್ಗಮಧ್ಯೆ ವಾಹನಗಳನ್ನು ತಡೆಹಿಡಿದು ಪ್ರತಿಭಟಿಸಿದರು.
ತುಮಕೂರು ಎಸ್ಪಿ ರಾಹುಲ್ ಕುಮಾರ್ ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರ ಗುಂಪನ್ನು ಚದುರಿಸುವ ಪ್ರಯತ್ನ ಮಾಡಿದರು. ತುಮಕೂರಿನ ಪೊಲೀಸ್ ಸಿಬ್ಬಂದಿಗಳೊಂದಿಗೆ ಎಸ್ಪಿ ಪ್ರತಿಭಟನಾ ಸ್ಥಳಕ್ಕೆ ತೆರಳಿ, ಸುಮಾರು 20 ಕಿ.ಮೀ. ವರೆಗೆ ಇದ್ದ ಟ್ರಾಫಿಕ್ ಅನ್ನು ಕ್ಲೀಯರ್ ಮಾಡುವ ಕಾರ್ಯದಲ್ಲಿ ತೊಡಗಿದರು.
+ There are no comments
Add yours